23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

ಬೆಳ್ತಂಗಡಿ: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು.

ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಕೋರಿದರು. ನೂತನ ಲಿಪ್ಟ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ನೆರವೇರಿಸಿ ಶುಭಕೋರಿದರು.

ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ,ಬ್ಯಾಂಕಿನ ನಿರ್ದೇಶಕ ಹಿರಿಯರಾದ ನಿರಂಜನ್ ಬಾವಂತಬೆಟ್ಟು,ಕೆಎಂಎಫ್ ಉಪಾಧ್ಯಕ್ಷ ಎಸ್.ಬಿ ಜಯರಾಮ್,ಕೆಂದ್ರ ಬ್ಯಾಂಕಿನ ನಿರ್ದೇಶಕ ಹರೀಶಚ್ಚಂದ್ರ,ಹಾಗೂ ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.

ದ‌ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರುಗಳು,ಬ್ಯಾಂಕಿನ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು,ತಾಲೂಕಿನ ಸಹಕಾರಿ ಸಂಘದ ಅಧ್ಯಕ್ಷರ,ನಿರ್ದೇಶಕರುಗಳು,ನೌಕರರ ವೃಂದದವರು,ನವೋದಯ ಸಂಘದ ಪದಾಧಿಕಾರಿಗಳು .

ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ನಿವೃತ ಸಿಇಓ ನಿತ್ಯಾನಂದ ಶೆಟ್ಟಿ ಪಿ.ಹೆಚ್ ಕಾರ್ಯಕ್ರಮ ನಿರೂಪಿಸಿದರು.ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಲಕೃಷ್ಣ ಭಟ್ ಧನ್ಯವಾದ ಸಮರ್ಪಿಸಿದರು.

Related posts

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya
error: Content is protected !!