September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

ಬೆಳ್ತಂಗಡಿ: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು.

ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಕೋರಿದರು. ನೂತನ ಲಿಪ್ಟ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ನೆರವೇರಿಸಿ ಶುಭಕೋರಿದರು.

ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ,ಬ್ಯಾಂಕಿನ ನಿರ್ದೇಶಕ ಹಿರಿಯರಾದ ನಿರಂಜನ್ ಬಾವಂತಬೆಟ್ಟು,ಕೆಎಂಎಫ್ ಉಪಾಧ್ಯಕ್ಷ ಎಸ್.ಬಿ ಜಯರಾಮ್,ಕೆಂದ್ರ ಬ್ಯಾಂಕಿನ ನಿರ್ದೇಶಕ ಹರೀಶಚ್ಚಂದ್ರ,ಹಾಗೂ ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.

ದ‌ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರುಗಳು,ಬ್ಯಾಂಕಿನ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು,ತಾಲೂಕಿನ ಸಹಕಾರಿ ಸಂಘದ ಅಧ್ಯಕ್ಷರ,ನಿರ್ದೇಶಕರುಗಳು,ನೌಕರರ ವೃಂದದವರು,ನವೋದಯ ಸಂಘದ ಪದಾಧಿಕಾರಿಗಳು .

ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ನಿವೃತ ಸಿಇಓ ನಿತ್ಯಾನಂದ ಶೆಟ್ಟಿ ಪಿ.ಹೆಚ್ ಕಾರ್ಯಕ್ರಮ ನಿರೂಪಿಸಿದರು.ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಲಕೃಷ್ಣ ಭಟ್ ಧನ್ಯವಾದ ಸಮರ್ಪಿಸಿದರು.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!