22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರು ಸರ್ಕಲ್ ಇದರ ವತಿಯಿಂದ ಆ.25 ರಂದು ಕಿಲ್ಲೂರು ಆಶಿಕ್ ಮನ್ಝಿಲ್ ನಲ್ಲಿ ಸವ೯ಧರ್ಮಿಯರ ಸೌಹಾದ೯ ಒಗ್ಗೂಡುವಿಕೆಯಲ್ಲಿ ಪ್ರಜಾಭಾರತ ಕಾರ್ಯಕ್ರಮ‌ ನಡೆಯಿತು.

ಕಾಜೂರು ಸರ್ಕಲ್ ಅಧ್ಯಕ್ಷ ದಿಡುಪೆ ಮುಹಮ್ಮದ್ ಅಲ ಅಧ್ಯಕ್ಷತೆ ವಹಿಸಿದ್ದರು. ಇಸ್ಮಾಯಿಲ್ ಫೈಝಿ ದುಆ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ತುಂಗಪ್ಪ ಪೂಜಾರಿ ಕಾಜೂರು, ವೀರಪ್ಪ ದೇವಾಡಿಗ ಬಂಗಾಡಿ ತಮ್ಮ ಬಾಲ್ಯ ಕಾಲದ ಸೌಹಾರ್ದದ ಬದುಕನ್ನು ಹಂಚಿಕೊಂಡರು.

ಕಾಜೂರು ದರ್ಗಾ ಶರೀಫ್ ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಮುಖ್ಯ ಭಾಷಣ ಮಾಡಿ ಕೋಮು ಸೌಹಾರ್ದತೆಯ ಅನಿವಾರ್ಯತೆಯನ್ನು ತಿಳಿಸಿದರು.

ಕಾಜೂರು ದರ್ಗಾ ಶರೀಫಿನ ಪ್ರಧಾನ ಕಾರ್ಯದರ್ಶಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ಕೋಶಾಧಿಕಾರಿ ಜೆ.ಎಚ್. ಅಬೂಬಕ್ಕರ್ ಸಿದ್ದೀಕ್ ಕಾಜೂರು, ಝೋನ್ ಸದಸ್ಯ ಕೆ.ಪಿ ಮುಹಮ್ಮದ್, ಕಿಲ್ಲೂರು ಮಸೀದಿ ಉಸ್ತುವಾರಿ ಹಂಝತ್, ಕೆ ಮುಹಮ್ಮದ್ ಕಿಲ್ಲೂರು ಹಾಗೂ ಎರ್ಮಾಳ, ಕಿಲ್ಲೂರು, ಪೆರ್ದಾಡಿ, ಕಾಜೂರು ಯುನಿಟ್ ಮತ್ತು ಸರ್ಜಲ್ ಗಳ ಪ್ರಮುಖರು ಪಾಲ್ಗೊಂಡಿದ್ದರು.

Related posts

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya
error: Content is protected !!