25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!