25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

ಧರ್ಮಸ್ಥಳ : ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಗದಗ ಮೂಲದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ ಎಂಬವರು ಆ.26 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು. ಕಾರನ್ನು ಲಾಕ್ ಮಾಡಿ ದೇವಸ್ಥಾನದ ಹತ್ತಿರ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಕಳ್ಳರು ಅವರು ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಕಾರಿನ ಗಾಜನ್ನು ಒಡೆದು ಕಾರಿನ ಒಳಗಿದ್ದ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ ರೂ.1.96 ಲಕ್ಷ ಮೌಲ್ಯದ 40 ಗ್ರಾಂ ತೂಕದ ಕರಿಮಣಿ ಸರ ಮತ್ತು ಸುಮಾರು ರೂ. 4 ಸಾವಿರ ಮೌಲ್ಯದ 1 ಮೊಬೈಲ್‌ನ್ನು ಕಳವು ಗೈದಿದ್ದರು.

ಬಸವರಾಜು ಅವರು ದೇವರ ದರ್ಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ನ್ನು ಯಾರೋ ಕಳ್ಳರು ಒಡೆದು ಅದರಲ್ಲಿದ್ದ ವಸ್ತುಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!