ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

ಧರ್ಮಸ್ಥಳ : ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಗದಗ ಮೂಲದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ ಎಂಬವರು ಆ.26 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು. ಕಾರನ್ನು ಲಾಕ್ ಮಾಡಿ ದೇವಸ್ಥಾನದ ಹತ್ತಿರ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಕಳ್ಳರು ಅವರು ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಕಾರಿನ ಗಾಜನ್ನು ಒಡೆದು ಕಾರಿನ ಒಳಗಿದ್ದ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ ರೂ.1.96 ಲಕ್ಷ ಮೌಲ್ಯದ 40 ಗ್ರಾಂ ತೂಕದ ಕರಿಮಣಿ ಸರ ಮತ್ತು ಸುಮಾರು ರೂ. 4 ಸಾವಿರ ಮೌಲ್ಯದ 1 ಮೊಬೈಲ್‌ನ್ನು ಕಳವು ಗೈದಿದ್ದರು.

ಬಸವರಾಜು ಅವರು ದೇವರ ದರ್ಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ನ್ನು ಯಾರೋ ಕಳ್ಳರು ಒಡೆದು ಅದರಲ್ಲಿದ್ದ ವಸ್ತುಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya
error: Content is protected !!