July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

ಬೆಳ್ತಂಗಡಿ: ನಿಡ್ಲೆ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಳಾದ ಸತೀಶ್ ಕೆ ಬಂಗೇರ ಕಾಶಿಪಟ್ಟ ಮತ್ತು ಕೆ.ಎಮ್ ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ ಗೌರವಿಸಿದರು. ನಂತರ ಸಚಿವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆ ಗಳನ್ನು ಸರ್ಕಾರ ಜಾರಿ ಮಾಡುತ್ತದೆ ಎಂದರು. ಸಚಿವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ದ.ಕ ಜಿಲ್ಲಾ ಎಸ್ ಸಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ, ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ. ಈಶ್ವರ ಭಟ್, ಪದ್ಮನಾಭ ಸಾಲಿಯಾನ್, ಸಂದೀಪ್ ನೀರಲ್ಕೆ, ಬೊಮ್ಮಣ್ಣ ಗೌಡ ಪುದುವೆಟ್ಟು ಮತ್ತು ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya
error: Content is protected !!