25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

ನಿಡ್ಲೆ: ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಹೊಸ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಆ.28 ರಂದು ನಿಡ್ಲೆ ಬರೆಂಗಾಯದ ಅಗ್ರಿ ಲೀಫ್ ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಿ ಸಚಿವರಾದ ಶರಣಬಸಪ್ಪ ದರ್ಶನಾಪುರರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹಷೇಂದ್ರ ಕುಮಾರ್‌, ಗೌರವಾನ್ವಿತ ಅತಿಥಿಗಳಾಗಿ ಮಾಜಿ ಶಾಸಕರು, ವಿಧಾನ ಪರಿಷತ್‌ ಹಾಗೂ ಎಸ್.ಯು.ಸಿ.ಒ ಬ್ಯಾಂಕ್ ಲಿ. ಅಧ್ಯಕ್ಷ ಮನೋಹರ ಮಸ್ಕಿ, ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್, ಶಶಿ ಕ್ಯಾಟರಿಂಗ್ ಸರ್ವಿಸ್ ನ ನಿರ್ದೇಶಕರು ಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶಶಿಧರ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಗ್ರಿಲಿಫ್ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಅವಿನಾಶ್ ರಾವ್, ಸಂಸ್ಥಾಪಕ ಅತಿಶಯ ಜೈನ್, ನಿರ್ದೇಶಕರಾದ ರಾಗ್ನಿಸ್, ಉಪಸ್ಥಿತರಿದ್ದರು.

Related posts

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!