22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ , , ಬೆಂಗಳೂರು ಇವರ ಸಹಯೋಗದಲ್ಲಿ6 ದಿನಗಳ ಸೋಲಾರ್ ತರಬೇತಿ ಶಿಬಿರವು ಪ್ರಾರಂಭವಾಗಿದೆ. ಸೆಲ್ಕೋ ಸೋಲಾರ್‌ನ ಸಂಚಿತ್ ರೈ ಏರಿಯಾ ಮೆನೇಜರ್, ಸೆಲ್ಕೋ ಪ್ರೈವೇಟ್ ಲಿಮಿಟೆಡ್ ಇವರು ದೀಪ ಬೆಳಗಿಸುವುದರ ಮುಖೇನ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು.

ಭಾರತೀಯ ವಿಕಾಸ ಟ್ರಸ್ಟ್ ಉಡುಪಿಯ ಜೀವನ್, ಪ್ರೋಗ್ರಾಮ್ ಮ್ಯಾನೇಜರ್ ಭಾರತೀಯ ವಿಕಾಸ ಟ್ರಸ್ಟ್ ಇವರು ಕಾರ್ಯಕ್ರಮದ ರೂಪರೇಷೆಗಳನ್ನು ತಿಳಿಸಿ ಸೋಲಾರ್ ವಿದ್ಯುತ್ ಉಪಕರಣಗಳ ಇಂದಿನ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಇವರು ಪ್ರಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ತರಬೇತಿ ಅಧಿಕಾರಿ ಪೀಟರ್ ಸಿಕ್ವೇರಾ ಉಪಸ್ಥಿತರಿದ್ದರು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಬಿ. ಇವರು ಕಾರ್ಯಕ್ರಮ ಆಯೋಜಿಸಿ ನಿರ್ವಹಿಸಿದರು. ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಉಡುಪ ವಂದಿಸಿದರು.

ಆರು ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಪ್ರಾಯೋಗಿಕ ತರಬೇತಿಯೊಂದಿಗೆ ಸೋಲಾರ್ ಲೈಟ್, ವಾಟರ್ ಹೀಟರ್ ಮುಂತಾದವುಗಳ ಅಳವಡಿಕೆ ದುರಸ್ತಿ ತರಬೇತಿ ನೀಡಲಾಗುತ್ತದೆ

Related posts

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಎಸ್. ಎಸ್. ಎಲ್. ಸಿ ಪರೀಕ್ಷೆ: ಶ್ರೀ ಧ.ಮಂ. ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ ರಿಗೆ ಶೇ. 91.52

Suddi Udaya

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya
error: Content is protected !!