23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆ.28 ರಂದು ನೆರವೇರಿತು.

ಮಂಗಳೂರು ಪ್ರಾಂತ್ಯದ ವೈಸಿಎಸ್, ವೈಎಸ್ಎಮ್ ನ ನಿರ್ದೇಶಕರಾದ ವಂ.ಫಾ| ರೋಶನ್ ಡಿಕುನ್ಹಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ಪರ್ಧಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಆಡಬೇಕೆಂದು ನುಡಿದು ಶುಭಹಾರೈಸಿದರು.

ಶಾಲಾ ಸಂಚಾಲಕರಾದ ಅತೀ ವಂ. ಫಾ| ವಾಲ್ಟರ್ ಡಿಮೆಲ್ಲೋರವರು ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿ ಆಶೀರ್ವದಿಸಿದರು. ಬೆಳ್ತಂಗಡಿ ನೋಡೆಲ್ ಅಧಿಕಾರಿ ಪಂಚಾಕ್ಷರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಳ್ತಂಗಡಿ ಸಮೂಹ ಸಂಪನ್ಮೂಲ ಅಧಿಕಾರಿ ಶ್ರೀಮತಿ ವಾರಿಜಾ ಪಂದ್ಯಾಟಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋ, ಚರ್ಚ್ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.

ಒಟ್ಟು ಬಾಲಕರು 9 ತಂಡಗಳು ಹಾಗೂ ಬಾಲಕಿಯರ 7 ತಂಡ ಹಾಗೂ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.

ಸಹಶಿಕ್ಷಕಿಯರಾದ ಶ್ರೀಮತಿ ಪಲ್ಲವಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶರತ್ ಪಿಂಟೋ ವಂದಿಸಿ, ಶ್ರೀಮತಿ ಎಲ್ವಿಟಾ ಪಾಯ್ಸ್ ಕಾರ್ಯಕ್ರಮ ನಿರ್ವಹಿಸಿದರು.

ಬಾಲಕರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ, ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಮಂಜೊಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ ಹಾಗೂ ಚರ್ಚ್ ಅನುದಾನಿತ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ದಿನದ ಎಲ್ಲಾ ಬಹುಮಾನಗಳ ಪ್ರಾಯೋಜಕತ್ವವನ್ನು ಲೋಬೋ ಇಂಡಸ್ಟ್ರೀಸ್, ಕೆಮ್ಮಟ್ಯಾರ್ ರೇಷ್ಮೆ ರೋಡ್ ರವರು ನೀಡಿ ಸಹಕರಿಸಿರುತ್ತಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya
error: Content is protected !!