25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡ0ತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ದೋಗೂ ನಾಯ್ಕರವರು ನೆರವೇರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಿದ್ದವನ ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿ ರಶ್ಮಿ ರವರು ರುಡ್ ಸೆಟ್ ಸಂಸ್ಥೆ ಬೆಳೆದು ಬಂದ ಬಗ್ಗೆ ಇಲ್ಲಿ ನೀಡುವ ತರಬೇತಿಗಳು, ತರಬೇತಿಯ ನಂತರ ಫಲಾನುಭವಿಗಳು ಸ್ವ ಉದ್ಯೋಗ ಮಾಡಲು ಪ್ರೇರಣೆ, ಬ್ಯಾಂಕ್ ನಲ್ಲಿ ಸಬ್ಸಿಡಿ ಯಲ್ಲಿ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಲಾಗುತಿದೆ, ತರಬೇತಿ ಪಡೆಯುವುದು ಮುಖ್ಯವಲ್ಲ ನಂತರ ದಿನಗಳಲ್ಲಿ ಕಲಿತ ವಿದ್ಯೆ ಯಲ್ಲಿ ಸ್ವ ಉದ್ಯೋಗ ಮಾಡುವುದು ಮುಖ್ಯ ವಾಗಿರುತ್ತದೆ ಇದರ ಬಗ್ಗೆ ನಾವು ತರಬೇತಿಯ ಬಳಿಕವು ಫಲಾನುಭಾವಿಯ ಸಂಪರ್ಕದಲ್ಲಿ ಇರುತ್ತೇವೆ. ಯಾಕೆಂದ್ರೆ ಎಲ್ಲರಿಗೂ ಸರಕಾರಿ, ಹಾಗೂ ಖಾಸಗಿ ಉದ್ಯೋಗ ಸಿಗಲು ಸಾಧ್ಯವಿಲ್ಲ ಅದರಿಂದ ಸ್ವ ಉದ್ಯೋಗ ಮಾಡಬೇಕಾದ ಅನಿವಾರ್ಯತೆ ಇದೇ ಎಂದರು ನಮ್ಮ ತರಬೇತಿ ಸಂಸ್ಥೆಯಲ್ಲಿ ಕೃಷಿ ಸಂಬಂಧಿತ, ಉತ್ಪನ ಸಂಬಂಧಿತ, ಉದ್ಯಮಶೀಲತಾ ತರಭೇತಿ , ಸೇವೆಗೆ ಸಂಬಂಧಿಸಿದಂತೆ ಸೆಲ್ ಫೋನ್ ರಿಪೇರಿ, ಸಿ. ಸಿ ಟಿವಿ, ಕಂಪ್ಯೂಟರ್, ಗ್ರಹೋಪಯೋಗಿ ಉಪಕರಣಗಳ ರಿಪೇರಿ, ಹಾಗೂ ಇನ್ನಿತರ ತರಭೇತಿಗಳನ್ನು ನೀಡಲಾಗುವುದು ಕಲಿಯಲು ಆಸಕ್ತಿ ಇರುವವರು ಇ-ಮೆಲ್, ವೆಬ್ ಸೈಟ್, ದೂರವಾಣಿ ಮುಖಂತರವು ಅರ್ಜಿ ನೀಡಬಹುದು ಎಂದರು.

ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಹರಿಣಿ ಸೇವಾಪ್ರತಿನಿಧಿ ಶೋಭಾ, ಒಕ್ಕೂಟ ಪದಾಧಿಕಾರಿಗಳಾದ ಗಣೇಶ್, ಆನಂದ, ಯಶೋಧ ಹಾಗೂ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮದ ನಿರೂಪಣೆ ಯನ್ನು ಶ್ವೇತಾ ರವರು ನೆರವೇರಿಸಿದರು.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya
error: Content is protected !!