25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಸಭೆಯು ಆ.27 ರಂದು ತಾಲೂಕು ಪಂಚಾಯತು ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಜನ ಒಕ್ಕೂಟದ ಅಧ್ಯಕ್ಷರಾದ ರಮಾನಂದ ಸಾಲ್ಯಾನ್ ವಹಿಸಿ ತಾಲೂಕು ಯುವಜನ ಒಕ್ಕೂಟದ ಮೂಲಕ ಸ್ಥಳೀಯ ಯುವಕ-ಯವತಿ ಹವ್ಯಾಸಿ ಸಂಘಗಳನ್ನು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ವಿವಿಧ ಚಟುವಟಿಕೆ ಹಾಗೂ ನಾಯಕ್ವತ ಶಿಬಿರಗಳನ್ನು ಏರ್ಪಡಿಸುವ ಬಗ್ಗೆ ಸಭೆಯಲ್ಲಿ ಸಲಹೆ ಇತ್ತರು.


ಮುಂದಿನ ಅಕ್ಟೋಬರ್ ತಿಂಗಳಲ್ಲಿ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟವನ್ನು ಉಜಿರೆ ಶ್ರೀ ಯುವಕ ಮಂಡಲ ಹಾಗೂ ಪ್ರಗತಿ ಯುವಕ ಮಂಡಲ ಮತ್ತು ಪ್ರಗತಿ ಯುವತಿ ಮಂಡಲ ಇವುಗಳ ಸಹಭಾಗಿತ್ವದಲ್ಲಿ ನಡೆಸುವುದಾಗಿ ನಿರ್ಧರಿಸಲಾಯಿತು.


ಒಕ್ಕೂಟದ ಬಲವರ್ಧನೆಗಾಗಿ ಗ್ರಾಮ ಮಟ್ಟದ ಸಂಘಟನೆಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಯುವಕ ಯುವತಿ ಮತ್ತು ಹವ್ಯಾಸಿ ಮಂಡಲಗಳ ಪದಾಧಿಕಾರಿಗಳಿಗೆ ವಸತಿ ಸಹಿತ ೨ ದಿವಸದ ನಾಯಕತ್ವ ತರಬೇತಿ ಶಿಬಿರವನ್ನು ಏರ್ಪಡಿಸುವುದಾಗಿಯೂ ಇದರ ಸಂಚಾಲಕರಾಗಿ ಚಿದಾನಂದ ಇಡ್ಯಾ ಇವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಯುವಜನ ಒಕ್ಕೂಟದ ಗೌರವಾಧ್ಯಕ್ಷ ರಾಜೀವ ಸಾಲ್ಯಾನ್ ಉಪಸ್ಥಿತರಿದ್ದು ಹೆಚ್ಚು – ಹೆಚ್ಚು ಯುವಕ – ಯುವತಿಯರು ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಲಹೆ ಇತ್ತರು.


ಮೊದಲಿಗೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ. ಸದಾಶಿವ ಹೆಗ್ಡೆ ಸ್ವಾಗತಿಸಿ ಹಿಂದಿನ ಸಭಾ ವರದಿಯನ್ನು ಓದಿ ಸಭೆ ಅಂಗೀಕರಿಸಲಾಯಿತು. ಕೊನೆಯಲ್ಲಿ ಒಕ್ಕೂಟದ ಕೋಶಾಧಿಕಾರಿ ಆನಂದ ಕೋಟ್ಯಾನ್ ಧನ್ಯವಾದ ಸಲ್ಲಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya
error: Content is protected !!