25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬೆಳ್ತಂಗಡಿ ಇದರ ೧೪ನೇ ವರ್ಷದ ಮಹಾಸಭೆಯು ಅಳದಂಗಡಿ ದೀಪಾ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಧನಿವರ್ಧಕ ಮತ್ತು ದೀಪಾಲಂಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಎಂ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಸಂಘದ ಅಧ್ಯಕ್ಷ ರಾಜಶೇಖರ ಶೆಟ್ಟಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಗೌರವ ಅಧ್ಯಕ್ಷ ಸುನಿಲ್ ಲೋಬೋ, ಉಪಾಧ್ಯಕ್ಷರಾದ ಜೋಸೆಫ್ ಕೆ. ಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ. ಯಚ್, ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿ ವಸಂತ್ ನಾವೂರು ಹಾಗೂ ಕ್ರೀಡಾ ಕಾರ್ಯದರ್ಶಿ ಮಹಮ್ಮದ್ ಸಮೀರ್ ಹಾಜರಿದ್ದರು.
ಸಂಘದ ಹಿರಿಯ ಸದಸ್ಯರಾದ ಲಕ್ಷ್ಮಣ್, ಜೋಸೆಫ್ ಕೆ. ಡಿ, ನಾರಾಯಣ ಗೌಡ ಇವರಿಗೆ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.


ಬಳಿಕ ಜಿಲ್ಲಾ ಸಂಘದ ಅಧ್ಯಕ್ಷ ರಾಜಶೇಖರ ಶೆಟ್ಟಿ ಮಾತಾಡಿ ಜಿಲ್ಲಾ ಸಂಘವು ತಾಲೂಕಿನ ಸಂಘದ ಜೊತೆ ಯಾವತ್ತೂ ಇರುವುದರ ಜೊತೆಗೆ ತಾಲೂಕು ಸಂಘಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ತಾಲೂಕು ಸಂಘ ಅಧ್ಯಕ್ಷ ಚಂದ್ರಶೇಖರ ಎಂ ಮಾತಾಡಿ ಪ್ರತಿಯೊಬ್ಬ ಸದಸ್ಯನೂ ಕಡ್ಡಾಯವಾಗಿ ಸಂಘದ ಸದಸ್ಯತ್ವ ಪಡೆಯಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಲೀಕರಿಂದ ಕೆಲಸಗಾರರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಿ ಕೊಡಲಾಯಿತು.
ಗುರುದೇವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿ ಕಾರ್ಯಕ್ರಮ ಆರಂಭವಾಯಿತು. ಉಪಾಧ್ಯಕ್ಷರಾದ ಜೋಸೆಫ್ ಕೆ.ಡಿ ಸ್ವಾಗತಿಸಿದರು. ಕೋಶಾಧಿಕಾರಿ ರೋಹಿತ್ ಕುಮಾರ್ ಲೆಕ್ಕಾಚಾರ ಮಂಡಿಸಿದರು. ಕಾರ್ಯದರ್ಶಿ ವಸಂತ್ ನಾವೂರು ಸಂಘದ ವಾರ್ಷಿಕ ವರದಿ ವಾಚಿಸಿದರು. ಸದಸ್ಯರಾದ ಮಾಥುಕುಟ್ಟಿ ಧನ್ಯವಾದವನ್ನಿತ್ತರು.

Related posts

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!