September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆ.28 ರಂದು ನೆರವೇರಿತು.

ಮಂಗಳೂರು ಪ್ರಾಂತ್ಯದ ವೈಸಿಎಸ್, ವೈಎಸ್ಎಮ್ ನ ನಿರ್ದೇಶಕರಾದ ವಂ.ಫಾ| ರೋಶನ್ ಡಿಕುನ್ಹಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ಪರ್ಧಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಆಡಬೇಕೆಂದು ನುಡಿದು ಶುಭಹಾರೈಸಿದರು.

ಶಾಲಾ ಸಂಚಾಲಕರಾದ ಅತೀ ವಂ. ಫಾ| ವಾಲ್ಟರ್ ಡಿಮೆಲ್ಲೋರವರು ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿ ಆಶೀರ್ವದಿಸಿದರು. ಬೆಳ್ತಂಗಡಿ ನೋಡೆಲ್ ಅಧಿಕಾರಿ ಪಂಚಾಕ್ಷರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಳ್ತಂಗಡಿ ಸಮೂಹ ಸಂಪನ್ಮೂಲ ಅಧಿಕಾರಿ ಶ್ರೀಮತಿ ವಾರಿಜಾ ಪಂದ್ಯಾಟಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋ, ಚರ್ಚ್ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.

ಒಟ್ಟು ಬಾಲಕರು 9 ತಂಡಗಳು ಹಾಗೂ ಬಾಲಕಿಯರ 7 ತಂಡ ಹಾಗೂ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.

ಸಹಶಿಕ್ಷಕಿಯರಾದ ಶ್ರೀಮತಿ ಪಲ್ಲವಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶರತ್ ಪಿಂಟೋ ವಂದಿಸಿ, ಶ್ರೀಮತಿ ಎಲ್ವಿಟಾ ಪಾಯ್ಸ್ ಕಾರ್ಯಕ್ರಮ ನಿರ್ವಹಿಸಿದರು.

ಬಾಲಕರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ, ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಮಂಜೊಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ ಹಾಗೂ ಚರ್ಚ್ ಅನುದಾನಿತ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ದಿನದ ಎಲ್ಲಾ ಬಹುಮಾನಗಳ ಪ್ರಾಯೋಜಕತ್ವವನ್ನು ಲೋಬೋ ಇಂಡಸ್ಟ್ರೀಸ್, ಕೆಮ್ಮಟ್ಯಾರ್ ರೇಷ್ಮೆ ರೋಡ್ ರವರು ನೀಡಿ ಸಹಕರಿಸಿರುತ್ತಾರೆ.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya
error: Content is protected !!