22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

ವೇಣೂರು : ಇತ್ತೀಚೆಗೆ ಹೆರಿಗೆ ಸಂದರ್ಭದಲ್ಲಿ ನಿಧನರಾದ ವೇಣೂರು ವಲಯದ ಟೈಲರ್ ಅಸೋಸಿಯೇಷನ್ ನ ಸದಸ್ಯೆ ಶಿಲ್ಪಾ ಆಚಾರ್ಯ ಇವರ ಮಗಳ ವಿದ್ಯಾಭ್ಯಾಸಕ್ಕೆಂದು ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ಸುಮಾರು ರೂ.50.ಸಾವಿರ ಒಟ್ಟು ಮಾಡಿದ್ದು ಇದರಲ್ಲಿ ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ಕಲಿಯುತ್ತಿರುವ ಶಿಲ್ಪಾ ಅವರ ಮಗಳಾದ ರಾಜೇಶ್ವರಿಯ ಏಳನೇ ತರಗತಿಯ ಪ್ರಸ್ತುತ ವರ್ಷದ ವಿದ್ಯಾಭ್ಯಾಸದ ಶುಲ್ಕ 10,000 ರೂಪಾಯಿಯನ್ನು ,.ಕುಂಭಶ್ರೀ ಸಂಸ್ಥೆಯ ಸಂಚಾಲಕರಾದ ಗಿರೀಶ್. ಕೆ.ಎಚ್.ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಅಸ್ವಿತ್ ಕುಲಾಲ್, ಸಂಸ್ಥೆಯ ಮುಖ್ಯೋಪಾಧ್ಯಯರಾದ ಶ್ರೀಮತಿ ಅಕ್ಷತಾ ಮತ್ತು ಶ್ರೀಮತಿ ಪವಿತ್ರ ಇವರ ಸಮ್ಮುಖದಲ್ಲಿ ನೀಡಲಾಯಿತು.

ಉಳಿದ 40,000 ಹಣವನ್ನು ವೇಣೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಒಂಬತ್ತು ವರ್ಷದ ಅವಧಿಗೆ ಶಿಲ್ಪಾಳ ಮಗಳು ರಾಜೇಶ್ವರಿಯ ಹೆಸರಿನಲ್ಲಿ ಫಿಕ್ಸಡ್ ಡಿಪಾಸಿಟ್ ಮಾಡಿ ಶಿಲ್ಪಾಳ ಮಗಳಾದ ರಾಜೇಶ್ವರಿಗೆ ಮತ್ತು ಪ್ರದೀಪ್ ಆಚಾರ್ಯ ರವರಿಗೆ ವಲಯದ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.


ಈ ಸಂದರ್ಭ ದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕುಮಾರ್, ಜಿಲ್ಲಾ ಸಮಿತಿ ಅಧ್ಯಕ್ಷ ಜಯಂತ್ ಉರ್ಲಾಂಡಿ, ಜಿಲ್ಲಾ ಸಮಿತಿಯ ಜೊತೆ ಕಾರ್ಯದರ್ಶಿ ಕುಶಾಲಪ್ಪ ಗೌಡ, ಹಾಗೂತಾಲುಕು ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಉಜಿರೆ, ತಾಲೂಕು ಸಮಿತಿಯ ಉಪಾಧ್ಯಕ್ಷರು ಪ್ರಮೀಳಾ ವೇಣೂರು , ವೇಣೂರು ವಲಯದ ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ಸುನೀತಾ , ಕೋಶಾಧಿಕಾರಿ ಸುಪ್ರೀತಾ, ಉಪಾಧ್ಯಕ್ಷರಾದ ಯೋಗೀಶ್, ಸುಚಿತ್ರಾ, ಹಾಗೂ ತಾಲೂಕು ಸಮಿತಿ ಸದಸ್ಯರು ರತ್ನಾಕರ ಹೆಗ್ಡೆ, ಆನಂದ್ ಕುಲಾಲ್, ಸಹನ ಶಾಸ್ತ್ರಿ, ಹಾಗೂ ಸಂಘಟನಾ ಕಾರ್ಯದರ್ಶಿಗಳು ಹರೀಶ್, ತುಳಸಿ ಉಪಸ್ಥಿತರಿದ್ದರು.

Related posts

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!