23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಬೈಂದೂರು ಆತಿಥ್ಯದಲ್ಲಿ ನಡೆದ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಹಲವಾರು ಪ್ರಶಸ್ತಿ, ಮನ್ನಣೆಗಳು ದೊರಕಿದೆ.

ಮಹಿಳಾ ವಿಭಾಗ ಮತ್ತು ಜ್ಯೂನಿಯರ್ ಜೆಸಿ ವಿಭಾಗದಿಂದ ಈ ವರ್ಷ ನಡೆದ ಕಾರ್ಯಕ್ರಮಗಳನ್ನ ಗಣನೆಗೆ ತೆಗೆದುಕ್ಕೊಂಡು ಈ ಪ್ರಶಸ್ತಿಗಳನ್ನ ನೀಡಲಾಗಿದ್ದು ಮಹಿಳಾ ವಿಭಾಗಕ್ಕೆ ಟಾಪ್ – 4 ಘಟಕ ಪ್ರಶಸ್ತಿ, ಜೆಸಿಐ ಬೆಳ್ತಂಗಡಿ ಘಟಕದ ಮಹಿಳಾ ಸಂಯೋಜಕಿ ಮಮಿತಾ ಸುಧೀರ್ ಗೆ ಟಾಪ್ – 2 ಪ್ರಶಸ್ತಿ ಲಭಿಸಿದೆ.

ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಟಾಪ್- 5 ಘಟಕಾಧ್ಯಕ್ಷ ಪ್ರಶಸ್ತಿ, ರಾಷ್ಟ್ರೀಯ ಕಾರ್ಯಕ್ರಮ ಜೂನಿಯರ್ ಜೆಸಿ ಸಪ್ತಾಹ ಯಶಸ್ವಿ ಆಯೋಜನೆಗಾಗಿ ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ವಿಶೇಷ ಮನ್ನಣೆಗೆ ಪಾತ್ರವಾದರು.

ಸಮ್ಮೇಳನದಲ್ಲಿ ಜೂನಿಯರ್ ಜೆಸಿಗಳಿಗೆ ಆಯೋಜಿಸಲಾದ ಪಿಕ್ ಅಂಡ್ ಆಕ್ಟ್ ಸ್ಪರ್ಧೆಯಲ್ಲಿ ಉಜ್ವಲ್ ದ್ವಿತೀಯ ಸ್ಥಾನ, ಡ್ಯಾನ್ಸಿಂಗ್ ಸ್ಟಾರ್ಸ್ ಸ್ಪರ್ಧೆಯಲ್ಲಿ ಘಟಕ ದ್ವಿತೀಯ ಸ್ಥಾನ ಪಡೆದಿದೆ‌.

ಜೆಸಿಐ ಭಾರತಕ್ಕೆ ವಿದ್ಯಾದಾನಕ್ಕೆ ದೇಣಿಗೆ ನೀಡಿದ ಘಟಕದ ಪೂರ್ವಾಧ್ಯಕ್ಷ ಮತ್ತು ವಲಯದ ನಿರ್ದೇಶಕ ಸ್ವರೂಪ್ ಶೇಖರ್ ರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ವಲಯದ ಪ್ರಥಮ ಕಾರ್ಯಕ್ರಮ ಸ್ವಾಗತ್ ಆಯೋಜನೆಗಾಗಿ ಘಟಕಾಧ್ಯಕ್ಷ ಶಂಕರ್ ರಾವ್ ರನ್ನು ಗೌರವಿಸಲಾಯಿತು.

ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷ ಪ್ರೀತಮ್ ಶೆಟ್ಟಿ, ಸದಸ್ಯರುಗಳಾದ ಶೈಲೇಶ್, ಪಿ. ಎಲ್ ಪ್ರಜ್ವಲ್, ವಿನಾಯಕ ಪ್ರಸಾದ್ ಮತ್ತು ರಶ್ಮಿ, ಜೂನಿಯರ್ ಜೆಸಿ ಸದಸ್ಯರು ಗಳಾದ ಕನ್ನಿಕಾ, ದೀಪ್ತಿ, ತ್ರಿಷ, ನೇವಿಲ್ ಮೋರಸ್, ವರ್ಷ ಶೆಟ್ಟಿ, ತೇಜಸ್, ಸಮನ್ವಿತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya
error: Content is protected !!