25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಲಿದೆ.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರ ಶರತ್‌ಕೃಷ್ಣ ಪಡ್ವೆಟ್ನಾಯ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ.

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್ ನಿರಖು ಠೇವಣಿ ಪತ್ರವನ್ನು ಬಿಡುಗಡೆಗೊಳಿಸಲಿದ್ದಾರೆ. ಭದ್ರತಾ ಕೊಠಡಿ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ ನಿರ್ದೇಶಕ ಮಂಜುನಾಥ ಎಸ್.ಕೆ., ಗಣಕಯಂತ್ರ ಉದ್ಘಾಟನೆಯನ್ನು ಕಾಯರ್ತ್ತಡ್ಕ ಸೈಂಟ್ ಸೆಬೆಸ್ಟಿಯನ್ ಚರ್ಚ್‌ನ ಧರ್ಮಗುರು ವಂ| ಫಾ. ಜೋಸೆಫ್ ವಾಲುಕಾರನ್ ನೆರವೇರಿಸಲಿದ್ದಾರೆ.

ಕಾಯರ್ತ್ತಡ್ಕ ಎಂ.ಜೆ.ಎಂ. ಧರ್ಮಗುರು ಮಹಮ್ಮದ್ ಹನೀಫ್ ಮದನಿ, ಕ.ರಾ.ಸೌ.ಸಂ.ಸ.ನಿ. ಜಿಲ್ಲಾ ಸಂಯೋಜಕ ವಿಜಯ್ ಬಿ.ಎಸ್., ನಿಡ್ಲೆ ಗ್ರಾ.ಪಂ. ಅಧ್ಯಕ್ಷ ಶ್ಯಾಮಲ, ನಿಡ್ಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಕೆ. ಭದ್ರಯ್ಯ ಗೌಡ ಭಾಗವಹಿಸಲಿದ್ದಾರೆ ಎಂದು ಬ್ಯಾಂಕಿನ ಉಪಾಧ್ಯಕ್ಷ ಗಂಗಾಧರ ಮಿತ್ತಮಾರು,ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ‌

Related posts

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya
error: Content is protected !!