April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡ0ತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ದೋಗೂ ನಾಯ್ಕರವರು ನೆರವೇರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಿದ್ದವನ ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿ ರಶ್ಮಿ ರವರು ರುಡ್ ಸೆಟ್ ಸಂಸ್ಥೆ ಬೆಳೆದು ಬಂದ ಬಗ್ಗೆ ಇಲ್ಲಿ ನೀಡುವ ತರಬೇತಿಗಳು, ತರಬೇತಿಯ ನಂತರ ಫಲಾನುಭವಿಗಳು ಸ್ವ ಉದ್ಯೋಗ ಮಾಡಲು ಪ್ರೇರಣೆ, ಬ್ಯಾಂಕ್ ನಲ್ಲಿ ಸಬ್ಸಿಡಿ ಯಲ್ಲಿ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಲಾಗುತಿದೆ, ತರಬೇತಿ ಪಡೆಯುವುದು ಮುಖ್ಯವಲ್ಲ ನಂತರ ದಿನಗಳಲ್ಲಿ ಕಲಿತ ವಿದ್ಯೆ ಯಲ್ಲಿ ಸ್ವ ಉದ್ಯೋಗ ಮಾಡುವುದು ಮುಖ್ಯ ವಾಗಿರುತ್ತದೆ ಇದರ ಬಗ್ಗೆ ನಾವು ತರಬೇತಿಯ ಬಳಿಕವು ಫಲಾನುಭಾವಿಯ ಸಂಪರ್ಕದಲ್ಲಿ ಇರುತ್ತೇವೆ. ಯಾಕೆಂದ್ರೆ ಎಲ್ಲರಿಗೂ ಸರಕಾರಿ, ಹಾಗೂ ಖಾಸಗಿ ಉದ್ಯೋಗ ಸಿಗಲು ಸಾಧ್ಯವಿಲ್ಲ ಅದರಿಂದ ಸ್ವ ಉದ್ಯೋಗ ಮಾಡಬೇಕಾದ ಅನಿವಾರ್ಯತೆ ಇದೇ ಎಂದರು ನಮ್ಮ ತರಬೇತಿ ಸಂಸ್ಥೆಯಲ್ಲಿ ಕೃಷಿ ಸಂಬಂಧಿತ, ಉತ್ಪನ ಸಂಬಂಧಿತ, ಉದ್ಯಮಶೀಲತಾ ತರಭೇತಿ , ಸೇವೆಗೆ ಸಂಬಂಧಿಸಿದಂತೆ ಸೆಲ್ ಫೋನ್ ರಿಪೇರಿ, ಸಿ. ಸಿ ಟಿವಿ, ಕಂಪ್ಯೂಟರ್, ಗ್ರಹೋಪಯೋಗಿ ಉಪಕರಣಗಳ ರಿಪೇರಿ, ಹಾಗೂ ಇನ್ನಿತರ ತರಭೇತಿಗಳನ್ನು ನೀಡಲಾಗುವುದು ಕಲಿಯಲು ಆಸಕ್ತಿ ಇರುವವರು ಇ-ಮೆಲ್, ವೆಬ್ ಸೈಟ್, ದೂರವಾಣಿ ಮುಖಂತರವು ಅರ್ಜಿ ನೀಡಬಹುದು ಎಂದರು.

ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಹರಿಣಿ ಸೇವಾಪ್ರತಿನಿಧಿ ಶೋಭಾ, ಒಕ್ಕೂಟ ಪದಾಧಿಕಾರಿಗಳಾದ ಗಣೇಶ್, ಆನಂದ, ಯಶೋಧ ಹಾಗೂ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮದ ನಿರೂಪಣೆ ಯನ್ನು ಶ್ವೇತಾ ರವರು ನೆರವೇರಿಸಿದರು.

Related posts

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya
error: Content is protected !!