25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಸಭೆಯು ಆ.27 ರಂದು ತಾಲೂಕು ಪಂಚಾಯತು ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಜನ ಒಕ್ಕೂಟದ ಅಧ್ಯಕ್ಷರಾದ ರಮಾನಂದ ಸಾಲ್ಯಾನ್ ವಹಿಸಿ ತಾಲೂಕು ಯುವಜನ ಒಕ್ಕೂಟದ ಮೂಲಕ ಸ್ಥಳೀಯ ಯುವಕ-ಯವತಿ ಹವ್ಯಾಸಿ ಸಂಘಗಳನ್ನು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ವಿವಿಧ ಚಟುವಟಿಕೆ ಹಾಗೂ ನಾಯಕ್ವತ ಶಿಬಿರಗಳನ್ನು ಏರ್ಪಡಿಸುವ ಬಗ್ಗೆ ಸಭೆಯಲ್ಲಿ ಸಲಹೆ ಇತ್ತರು.


ಮುಂದಿನ ಅಕ್ಟೋಬರ್ ತಿಂಗಳಲ್ಲಿ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟವನ್ನು ಉಜಿರೆ ಶ್ರೀ ಯುವಕ ಮಂಡಲ ಹಾಗೂ ಪ್ರಗತಿ ಯುವಕ ಮಂಡಲ ಮತ್ತು ಪ್ರಗತಿ ಯುವತಿ ಮಂಡಲ ಇವುಗಳ ಸಹಭಾಗಿತ್ವದಲ್ಲಿ ನಡೆಸುವುದಾಗಿ ನಿರ್ಧರಿಸಲಾಯಿತು.


ಒಕ್ಕೂಟದ ಬಲವರ್ಧನೆಗಾಗಿ ಗ್ರಾಮ ಮಟ್ಟದ ಸಂಘಟನೆಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಯುವಕ ಯುವತಿ ಮತ್ತು ಹವ್ಯಾಸಿ ಮಂಡಲಗಳ ಪದಾಧಿಕಾರಿಗಳಿಗೆ ವಸತಿ ಸಹಿತ ೨ ದಿವಸದ ನಾಯಕತ್ವ ತರಬೇತಿ ಶಿಬಿರವನ್ನು ಏರ್ಪಡಿಸುವುದಾಗಿಯೂ ಇದರ ಸಂಚಾಲಕರಾಗಿ ಚಿದಾನಂದ ಇಡ್ಯಾ ಇವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಯುವಜನ ಒಕ್ಕೂಟದ ಗೌರವಾಧ್ಯಕ್ಷ ರಾಜೀವ ಸಾಲ್ಯಾನ್ ಉಪಸ್ಥಿತರಿದ್ದು ಹೆಚ್ಚು – ಹೆಚ್ಚು ಯುವಕ – ಯುವತಿಯರು ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಲಹೆ ಇತ್ತರು.


ಮೊದಲಿಗೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ. ಸದಾಶಿವ ಹೆಗ್ಡೆ ಸ್ವಾಗತಿಸಿ ಹಿಂದಿನ ಸಭಾ ವರದಿಯನ್ನು ಓದಿ ಸಭೆ ಅಂಗೀಕರಿಸಲಾಯಿತು. ಕೊನೆಯಲ್ಲಿ ಒಕ್ಕೂಟದ ಕೋಶಾಧಿಕಾರಿ ಆನಂದ ಕೋಟ್ಯಾನ್ ಧನ್ಯವಾದ ಸಲ್ಲಿಸಿದರು.

Related posts

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya
error: Content is protected !!