25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಅಳದಂಗಡಿ : 20ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು, ಸಾಧನ ಜ್ಞಾನವಿಕಾಸ ಕೇಂದ್ರ ಮತ್ತು ಜನಜಾಗೃತಿ ಗ್ರಾಮ ಸಮಿತಿ, ಹಾಗೂ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ, ಬಡಗಕಾರಂದೂರು ಇವುಗಳ ಸಹಕಾರದೊಂದಿಗೆ ನಡೆಯಿತು.

ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ್ ಹೊಳ್ಳರವರ ನೇತ್ರತ್ವ ದಲ್ಲಿ ಪೂಜಾ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು. ಶ್ರೀ ಸೋಮನಾಥೇಶೢರಿ ಭಜನಾ ಮಂಡಲಿ ಅಳದಂಗಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೆ.ವಿ,ಭಟ್ ನಾಳ ಬೆಳ್ತಂಗಡಿ ಧಾರ್ಮಿಕ ಉಪನ್ಯಾಸವನ್ನು ನೀಡಿ ತಾಯಂದಿರು ಮಕ್ಕಳನ್ನು ಯಾವ ರೀತಿ ನೈತಿಕ ಶಿಕ್ಷಣ ನೀಡಿ ಸಾಕಬೇಕು ಎಂಬುದನ್ನು ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷ ರಾಗಿ ಶ್ರೀಮತಿ ಮೀರಾ ನಿತ್ಯಾನಂದ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಾ. ಕೃ.ಪ.ಸಹಕಾರ ಸಂಘ ಅಳದಂಗಡಿ. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿಗಳು ದಯಾನಂದ ಪೂಜಾರಿ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ.ಟ್ರಸ್ಟ್ ಗುರುವಾಯನಕೆರೆ .ರವರು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಮಹತ್ವ ದ ಬಗ್ಗೆ ಮಾತನಾಡಿದರು.ವೇದಿಕೆ ಯಲ್ಲಿ ಶ್ರೀ ನಾರಾಯಣ ಸಾಲಿಯಾನ್ ವಲಯ ಜನಜಾಗ್ರ್ರತಿ ಅಧ್ಯಕ್ಷರು, ಶ್ರೀಮತಿ ರೂಪಾ ವಿಶ್ವನಾಥ, ಅಧ್ಯಕ್ಷರು ಶ್ರೀ ವರಮಹಾಲಕ್ಷ್ಮಿ ಪೂಜೆ ಸಮಿತಿ, ಬಡಗಕಾರಂದೂರು, ಶ್ರೀ ಮಂಜುನಾಥ ಆಚಾರ್ಯ, ಎ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು, ಶ್ರೀ ಹರೀಶ್ ಆಚಾರ್ಯ, ಬಿ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು. ಉಪಸ್ತಿತರಿದ್ದರು. ಎ ಒಕ್ಕೂಟ ಅಧ್ಯಕ್ಷರು ಶ್ರೀ ಮಂಜುನಾಥ ಆಚಾರ್ಯ ಸ್ವಾಗತಿಸಿದರು,ಸೇವಾಫ್ರತಿನಿಧಿ ಶ್ರೀಮತಿ ಹೇಮಲತ ವರದಿ ವಾಚಿಸಿದರು, ಶ್ರೀ ಹರೀಶ್ ಆಚಾರ್ಯ ಧನ್ಯವಾದವಿತ್ತರು.

Related posts

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya
error: Content is protected !!