July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಅಳದಂಗಡಿ : 20ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು, ಸಾಧನ ಜ್ಞಾನವಿಕಾಸ ಕೇಂದ್ರ ಮತ್ತು ಜನಜಾಗೃತಿ ಗ್ರಾಮ ಸಮಿತಿ, ಹಾಗೂ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ, ಬಡಗಕಾರಂದೂರು ಇವುಗಳ ಸಹಕಾರದೊಂದಿಗೆ ನಡೆಯಿತು.

ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ್ ಹೊಳ್ಳರವರ ನೇತ್ರತ್ವ ದಲ್ಲಿ ಪೂಜಾ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು. ಶ್ರೀ ಸೋಮನಾಥೇಶೢರಿ ಭಜನಾ ಮಂಡಲಿ ಅಳದಂಗಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೆ.ವಿ,ಭಟ್ ನಾಳ ಬೆಳ್ತಂಗಡಿ ಧಾರ್ಮಿಕ ಉಪನ್ಯಾಸವನ್ನು ನೀಡಿ ತಾಯಂದಿರು ಮಕ್ಕಳನ್ನು ಯಾವ ರೀತಿ ನೈತಿಕ ಶಿಕ್ಷಣ ನೀಡಿ ಸಾಕಬೇಕು ಎಂಬುದನ್ನು ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷ ರಾಗಿ ಶ್ರೀಮತಿ ಮೀರಾ ನಿತ್ಯಾನಂದ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಾ. ಕೃ.ಪ.ಸಹಕಾರ ಸಂಘ ಅಳದಂಗಡಿ. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿಗಳು ದಯಾನಂದ ಪೂಜಾರಿ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ.ಟ್ರಸ್ಟ್ ಗುರುವಾಯನಕೆರೆ .ರವರು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಮಹತ್ವ ದ ಬಗ್ಗೆ ಮಾತನಾಡಿದರು.ವೇದಿಕೆ ಯಲ್ಲಿ ಶ್ರೀ ನಾರಾಯಣ ಸಾಲಿಯಾನ್ ವಲಯ ಜನಜಾಗ್ರ್ರತಿ ಅಧ್ಯಕ್ಷರು, ಶ್ರೀಮತಿ ರೂಪಾ ವಿಶ್ವನಾಥ, ಅಧ್ಯಕ್ಷರು ಶ್ರೀ ವರಮಹಾಲಕ್ಷ್ಮಿ ಪೂಜೆ ಸಮಿತಿ, ಬಡಗಕಾರಂದೂರು, ಶ್ರೀ ಮಂಜುನಾಥ ಆಚಾರ್ಯ, ಎ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು, ಶ್ರೀ ಹರೀಶ್ ಆಚಾರ್ಯ, ಬಿ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು. ಉಪಸ್ತಿತರಿದ್ದರು. ಎ ಒಕ್ಕೂಟ ಅಧ್ಯಕ್ಷರು ಶ್ರೀ ಮಂಜುನಾಥ ಆಚಾರ್ಯ ಸ್ವಾಗತಿಸಿದರು,ಸೇವಾಫ್ರತಿನಿಧಿ ಶ್ರೀಮತಿ ಹೇಮಲತ ವರದಿ ವಾಚಿಸಿದರು, ಶ್ರೀ ಹರೀಶ್ ಆಚಾರ್ಯ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

Suddi Udaya
error: Content is protected !!