July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ  “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ  ಮಹಾರಾಜಾ ಕಾಲೇಜು ಮೈದಾನದಲ್ಲಿ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಸಚಿವರು  ಚಾಲನೆ ನೀಡುವ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಮಿನಿ ವಿಧಾನಸೌಧ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ, ಹಾಗೂ ಕೆಲ್ಲಗುತ್ತು ಸಮುದಾಯ ಭವನದಲ್ಲಿ ಎಲ್ ಇ ಡಿ ಪರದೆ  ಮೇಲೆ ಬಿತ್ತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ ಟಿ ಸುರೇಶ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಪಿಡಿಪಿಒ ಪ್ರೀಯ ಆಗ್ನೇಸ್, ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ಸದಸ್ಯರಾದ ಜಗದೀಶ್ ಉಪಸ್ಥಿತರಿದ್ದರು.

ಯೋಜನೆಯ ಉದ್ಘಾಟನಾ ಕಾರ್ಯಕ್ರಮ  ಹಾಗು ಸಚಿವರ ಭಾಷಣವನ್ನು ನೇರ ಪ್ರಸಾರದಲ್ಲಿ ಬಿತ್ತರಿಸಲಾಯಿತು.

ಬೆಳ್ತಂಗಡಿ ನಗರದ ಸಹಸ್ರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ  ನಗದು ವರ್ಗಾವಣೆಗೊಂಡ ಬಗೆಗೆ  ಅವರವರ ಮೊಬೈಲ್ ಗೆ ಸಂದೇಶ ರವಾನೆಯಾಗಲಿದೆಯೆಂದು  ತಿಳಿಸಲಾಯಿತು. 

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
error: Content is protected !!