ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ಅಳದಂಗಡಿ: ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ, ಕೊಡುಗೈ ದಾನಿ ರವಿರಾಜ್ ಹೆಗ್ಡೆ (83ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಆ.30 ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ರವಿರಾಜ್ ಹೆಗ್ಡೆಯವರು ಅಳದಂಗಡಿ ಬ್ರಹ್ಮದೇವರ ಬೆಟ್ಟದ ಬಸದಿ, ಆದಿನಾಥ ಬಸದಿಯ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ಸಕ್ರೀಯರಾಗಿದ್ದರು.ಹಲವು ವರ್ಷಗಳ ಹಿಂದೆ ಗುತ್ತಿಗೆದಾರರಾಗಿಯೂ ಜನಪ್ರಿಯತೆಯನ್ನು ಗಳಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!