23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಅಳದಂಗಡಿ : 20ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು, ಸಾಧನ ಜ್ಞಾನವಿಕಾಸ ಕೇಂದ್ರ ಮತ್ತು ಜನಜಾಗೃತಿ ಗ್ರಾಮ ಸಮಿತಿ, ಹಾಗೂ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ, ಬಡಗಕಾರಂದೂರು ಇವುಗಳ ಸಹಕಾರದೊಂದಿಗೆ ನಡೆಯಿತು.

ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ್ ಹೊಳ್ಳರವರ ನೇತ್ರತ್ವ ದಲ್ಲಿ ಪೂಜಾ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು. ಶ್ರೀ ಸೋಮನಾಥೇಶೢರಿ ಭಜನಾ ಮಂಡಲಿ ಅಳದಂಗಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೆ.ವಿ,ಭಟ್ ನಾಳ ಬೆಳ್ತಂಗಡಿ ಧಾರ್ಮಿಕ ಉಪನ್ಯಾಸವನ್ನು ನೀಡಿ ತಾಯಂದಿರು ಮಕ್ಕಳನ್ನು ಯಾವ ರೀತಿ ನೈತಿಕ ಶಿಕ್ಷಣ ನೀಡಿ ಸಾಕಬೇಕು ಎಂಬುದನ್ನು ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷ ರಾಗಿ ಶ್ರೀಮತಿ ಮೀರಾ ನಿತ್ಯಾನಂದ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಾ. ಕೃ.ಪ.ಸಹಕಾರ ಸಂಘ ಅಳದಂಗಡಿ. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿಗಳು ದಯಾನಂದ ಪೂಜಾರಿ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ.ಟ್ರಸ್ಟ್ ಗುರುವಾಯನಕೆರೆ .ರವರು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಮಹತ್ವ ದ ಬಗ್ಗೆ ಮಾತನಾಡಿದರು.ವೇದಿಕೆ ಯಲ್ಲಿ ಶ್ರೀ ನಾರಾಯಣ ಸಾಲಿಯಾನ್ ವಲಯ ಜನಜಾಗ್ರ್ರತಿ ಅಧ್ಯಕ್ಷರು, ಶ್ರೀಮತಿ ರೂಪಾ ವಿಶ್ವನಾಥ, ಅಧ್ಯಕ್ಷರು ಶ್ರೀ ವರಮಹಾಲಕ್ಷ್ಮಿ ಪೂಜೆ ಸಮಿತಿ, ಬಡಗಕಾರಂದೂರು, ಶ್ರೀ ಮಂಜುನಾಥ ಆಚಾರ್ಯ, ಎ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು, ಶ್ರೀ ಹರೀಶ್ ಆಚಾರ್ಯ, ಬಿ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು. ಉಪಸ್ತಿತರಿದ್ದರು. ಎ ಒಕ್ಕೂಟ ಅಧ್ಯಕ್ಷರು ಶ್ರೀ ಮಂಜುನಾಥ ಆಚಾರ್ಯ ಸ್ವಾಗತಿಸಿದರು,ಸೇವಾಫ್ರತಿನಿಧಿ ಶ್ರೀಮತಿ ಹೇಮಲತ ವರದಿ ವಾಚಿಸಿದರು, ಶ್ರೀ ಹರೀಶ್ ಆಚಾರ್ಯ ಧನ್ಯವಾದವಿತ್ತರು.

Related posts

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya
error: Content is protected !!