September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಅಳದಂಗಡಿ : 20ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು, ಸಾಧನ ಜ್ಞಾನವಿಕಾಸ ಕೇಂದ್ರ ಮತ್ತು ಜನಜಾಗೃತಿ ಗ್ರಾಮ ಸಮಿತಿ, ಹಾಗೂ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ, ಬಡಗಕಾರಂದೂರು ಇವುಗಳ ಸಹಕಾರದೊಂದಿಗೆ ನಡೆಯಿತು.

ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ್ ಹೊಳ್ಳರವರ ನೇತ್ರತ್ವ ದಲ್ಲಿ ಪೂಜಾ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು. ಶ್ರೀ ಸೋಮನಾಥೇಶೢರಿ ಭಜನಾ ಮಂಡಲಿ ಅಳದಂಗಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೆ.ವಿ,ಭಟ್ ನಾಳ ಬೆಳ್ತಂಗಡಿ ಧಾರ್ಮಿಕ ಉಪನ್ಯಾಸವನ್ನು ನೀಡಿ ತಾಯಂದಿರು ಮಕ್ಕಳನ್ನು ಯಾವ ರೀತಿ ನೈತಿಕ ಶಿಕ್ಷಣ ನೀಡಿ ಸಾಕಬೇಕು ಎಂಬುದನ್ನು ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷ ರಾಗಿ ಶ್ರೀಮತಿ ಮೀರಾ ನಿತ್ಯಾನಂದ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಾ. ಕೃ.ಪ.ಸಹಕಾರ ಸಂಘ ಅಳದಂಗಡಿ. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿಗಳು ದಯಾನಂದ ಪೂಜಾರಿ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ.ಟ್ರಸ್ಟ್ ಗುರುವಾಯನಕೆರೆ .ರವರು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಮಹತ್ವ ದ ಬಗ್ಗೆ ಮಾತನಾಡಿದರು.ವೇದಿಕೆ ಯಲ್ಲಿ ಶ್ರೀ ನಾರಾಯಣ ಸಾಲಿಯಾನ್ ವಲಯ ಜನಜಾಗ್ರ್ರತಿ ಅಧ್ಯಕ್ಷರು, ಶ್ರೀಮತಿ ರೂಪಾ ವಿಶ್ವನಾಥ, ಅಧ್ಯಕ್ಷರು ಶ್ರೀ ವರಮಹಾಲಕ್ಷ್ಮಿ ಪೂಜೆ ಸಮಿತಿ, ಬಡಗಕಾರಂದೂರು, ಶ್ರೀ ಮಂಜುನಾಥ ಆಚಾರ್ಯ, ಎ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು, ಶ್ರೀ ಹರೀಶ್ ಆಚಾರ್ಯ, ಬಿ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು. ಉಪಸ್ತಿತರಿದ್ದರು. ಎ ಒಕ್ಕೂಟ ಅಧ್ಯಕ್ಷರು ಶ್ರೀ ಮಂಜುನಾಥ ಆಚಾರ್ಯ ಸ್ವಾಗತಿಸಿದರು,ಸೇವಾಫ್ರತಿನಿಧಿ ಶ್ರೀಮತಿ ಹೇಮಲತ ವರದಿ ವಾಚಿಸಿದರು, ಶ್ರೀ ಹರೀಶ್ ಆಚಾರ್ಯ ಧನ್ಯವಾದವಿತ್ತರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya
error: Content is protected !!