September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಉಜಿರೆ . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ  “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ  ಮಹಾರಾಜಾ ಕಾಲೇಜು ಮೈದಾನದಲ್ಲಿ ಮಾನ್ಯ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಸಚಿವರು  ಚಾಲನೆ ನೀಡುವ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ  ಎಲ್ ಇ ಡಿ ಪರದೆ  ಮೇಲೆ ಬಿತ್ತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉಜಿರೆ ಪರಿಸರದ ಸಹಸ್ರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.               

ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಸರ್ವರನ್ನೂ ಸ್ವಾಗತಿಸಿ, ಸರಕಾರದ ಯೋಜನೆಯ ಕುರಿತು ಪ್ರಸ್ತಾವಿಸಿದರು.  ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್,ಉಪಾಧ್ಯಕ್ಷ ರವಿಕುಮಾರ್ ಬರಮೇಲು ,ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ,ಕಾರ್ಯದರ್ಶಿ,ಸದಸ್ಯರು ಮತ್ತು  ಸಿಬಂದಿ ವರ್ಗ ಉಪಸ್ಥಿತರಿದ್ದರು. ಶ್ರೀ ಶಾರದಾ ಮಂಟಪ ಮಹಿಳಾ  ಫಲಾನುಭವಿಗಳಿಂದ  ತುಂಬಿ ತುಳುಕುತ್ತಿತ್ತು.  ಯೋಜನೆಯ ಉದ್ಘಾಟನಾ ಕಾರ್ಯಕ್ರಮ  ಹಾಗು ಸಚಿವರ ಭಾಷಣವನ್ನು ನೇರ ಪ್ರಸಾರದಲ್ಲಿ ಬಿತ್ತರಿಸಲಾಯಿತು. ಕಾರ್ಯಕ್ರಮದ ಬಳಿಕ ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ  ನಗದು ವರ್ಗಾವಣೆಗೊಂಡ ಬಗೆಗೆ  ಅವರವರ ಮೊಬೈಲ್ ಗೆ ಸಂದೇಶ ರವಾನೆಯಾಗಲಿದೆಯೆಂದು  ತಿಳಿಸಲಾಯಿತು. 

Related posts

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya
error: Content is protected !!