32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ


ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಆ.29 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯ ವ್ಯಕ್ತಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಗಂಡಿಬಾಗಿಲು ಚರ್ಚ್‌ನ ಧರ್ಮಗುರುಗಳಾದ ರೆ.ಫಾ.ಜೋಸೆಫ್ ಆಯಂಗುಡಿಯವರು ಆಶೀರ್ವದಿಸಿದರು. ಸಿಯೋನ್, ಆಶ್ರಮದ ಮ್ಯಾನೇಜಿಂಗ್ ಟ್ರಿಸ್ಪಿಯವರಾದ ಯು.ಸಿ.ಪೌಲೋಸ್‌ರವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಹಬ್ಬಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು, ಮೇಲ್ವಿಚಾರಕರು ಹಾಗೂ ಸೇವಾನಿರತರು, ನೆರಿಯ ಗ್ರಾಮ ಪಂಚಾಯತ್‌ ಸದಸ್ಯರುಗಳು, ಊರಿನ ಹಾಗೂ ನೆರೆಕರೆಯ ಗ್ರಾಮಸ್ಥರು, ಶೌರ್ಯ ವಿಪತ್ತು ನಿರ್ವಹಣಾ ಘಟಕದವರು ಸೇರಿದಂತೆ ಇತರ ಸಂಘ ಸಂಸ್ಥೆಯವರು. ಸಿಯೋನ್ ಸಂಸ್ಥೆಯ ಎಲ್ಲಾ ಟ್ರಸ್ಟಿ ಸದಸ್ಯರುಗಳು, ಕುಟುಂಬಸ್ಥರು. ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

ಸಿಯೋನ್‌ ಅಶ್ರಮದ ಸಿಬ್ಬಂದಿವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂತ್ವನಂ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Related posts

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya
error: Content is protected !!