24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ


ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಆ.29 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯ ವ್ಯಕ್ತಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಗಂಡಿಬಾಗಿಲು ಚರ್ಚ್‌ನ ಧರ್ಮಗುರುಗಳಾದ ರೆ.ಫಾ.ಜೋಸೆಫ್ ಆಯಂಗುಡಿಯವರು ಆಶೀರ್ವದಿಸಿದರು. ಸಿಯೋನ್, ಆಶ್ರಮದ ಮ್ಯಾನೇಜಿಂಗ್ ಟ್ರಿಸ್ಪಿಯವರಾದ ಯು.ಸಿ.ಪೌಲೋಸ್‌ರವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಹಬ್ಬಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು, ಮೇಲ್ವಿಚಾರಕರು ಹಾಗೂ ಸೇವಾನಿರತರು, ನೆರಿಯ ಗ್ರಾಮ ಪಂಚಾಯತ್‌ ಸದಸ್ಯರುಗಳು, ಊರಿನ ಹಾಗೂ ನೆರೆಕರೆಯ ಗ್ರಾಮಸ್ಥರು, ಶೌರ್ಯ ವಿಪತ್ತು ನಿರ್ವಹಣಾ ಘಟಕದವರು ಸೇರಿದಂತೆ ಇತರ ಸಂಘ ಸಂಸ್ಥೆಯವರು. ಸಿಯೋನ್ ಸಂಸ್ಥೆಯ ಎಲ್ಲಾ ಟ್ರಸ್ಟಿ ಸದಸ್ಯರುಗಳು, ಕುಟುಂಬಸ್ಥರು. ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

ಸಿಯೋನ್‌ ಅಶ್ರಮದ ಸಿಬ್ಬಂದಿವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂತ್ವನಂ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Related posts

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya
error: Content is protected !!