24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ


ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಆ.29 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯ ವ್ಯಕ್ತಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಗಂಡಿಬಾಗಿಲು ಚರ್ಚ್‌ನ ಧರ್ಮಗುರುಗಳಾದ ರೆ.ಫಾ.ಜೋಸೆಫ್ ಆಯಂಗುಡಿಯವರು ಆಶೀರ್ವದಿಸಿದರು. ಸಿಯೋನ್, ಆಶ್ರಮದ ಮ್ಯಾನೇಜಿಂಗ್ ಟ್ರಿಸ್ಪಿಯವರಾದ ಯು.ಸಿ.ಪೌಲೋಸ್‌ರವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಹಬ್ಬಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು, ಮೇಲ್ವಿಚಾರಕರು ಹಾಗೂ ಸೇವಾನಿರತರು, ನೆರಿಯ ಗ್ರಾಮ ಪಂಚಾಯತ್‌ ಸದಸ್ಯರುಗಳು, ಊರಿನ ಹಾಗೂ ನೆರೆಕರೆಯ ಗ್ರಾಮಸ್ಥರು, ಶೌರ್ಯ ವಿಪತ್ತು ನಿರ್ವಹಣಾ ಘಟಕದವರು ಸೇರಿದಂತೆ ಇತರ ಸಂಘ ಸಂಸ್ಥೆಯವರು. ಸಿಯೋನ್ ಸಂಸ್ಥೆಯ ಎಲ್ಲಾ ಟ್ರಸ್ಟಿ ಸದಸ್ಯರುಗಳು, ಕುಟುಂಬಸ್ಥರು. ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

ಸಿಯೋನ್‌ ಅಶ್ರಮದ ಸಿಬ್ಬಂದಿವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂತ್ವನಂ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

Related posts

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!