ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ  “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ  ಮಹಾರಾಜಾ ಕಾಲೇಜು ಮೈದಾನದಲ್ಲಿ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಸಚಿವರು  ಚಾಲನೆ ನೀಡುವ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಮಿನಿ ವಿಧಾನಸೌಧ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ, ಹಾಗೂ ಕೆಲ್ಲಗುತ್ತು ಸಮುದಾಯ ಭವನದಲ್ಲಿ ಎಲ್ ಇ ಡಿ ಪರದೆ  ಮೇಲೆ ಬಿತ್ತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ ಟಿ ಸುರೇಶ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಪಿಡಿಪಿಒ ಪ್ರೀಯ ಆಗ್ನೇಸ್, ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ಸದಸ್ಯರಾದ ಜಗದೀಶ್ ಉಪಸ್ಥಿತರಿದ್ದರು.

ಯೋಜನೆಯ ಉದ್ಘಾಟನಾ ಕಾರ್ಯಕ್ರಮ  ಹಾಗು ಸಚಿವರ ಭಾಷಣವನ್ನು ನೇರ ಪ್ರಸಾರದಲ್ಲಿ ಬಿತ್ತರಿಸಲಾಯಿತು.

ಬೆಳ್ತಂಗಡಿ ನಗರದ ಸಹಸ್ರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ  ನಗದು ವರ್ಗಾವಣೆಗೊಂಡ ಬಗೆಗೆ  ಅವರವರ ಮೊಬೈಲ್ ಗೆ ಸಂದೇಶ ರವಾನೆಯಾಗಲಿದೆಯೆಂದು  ತಿಳಿಸಲಾಯಿತು. 

Leave a Comment

error: Content is protected !!