24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ  “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ  ಮಹಾರಾಜಾ ಕಾಲೇಜು ಮೈದಾನದಲ್ಲಿ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಸಚಿವರು  ಚಾಲನೆ ನೀಡುವ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಮಿನಿ ವಿಧಾನಸೌಧ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ, ಹಾಗೂ ಕೆಲ್ಲಗುತ್ತು ಸಮುದಾಯ ಭವನದಲ್ಲಿ ಎಲ್ ಇ ಡಿ ಪರದೆ  ಮೇಲೆ ಬಿತ್ತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ ಟಿ ಸುರೇಶ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಪಿಡಿಪಿಒ ಪ್ರೀಯ ಆಗ್ನೇಸ್, ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ಸದಸ್ಯರಾದ ಜಗದೀಶ್ ಉಪಸ್ಥಿತರಿದ್ದರು.

ಯೋಜನೆಯ ಉದ್ಘಾಟನಾ ಕಾರ್ಯಕ್ರಮ  ಹಾಗು ಸಚಿವರ ಭಾಷಣವನ್ನು ನೇರ ಪ್ರಸಾರದಲ್ಲಿ ಬಿತ್ತರಿಸಲಾಯಿತು.

ಬೆಳ್ತಂಗಡಿ ನಗರದ ಸಹಸ್ರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ  ನಗದು ವರ್ಗಾವಣೆಗೊಂಡ ಬಗೆಗೆ  ಅವರವರ ಮೊಬೈಲ್ ಗೆ ಸಂದೇಶ ರವಾನೆಯಾಗಲಿದೆಯೆಂದು  ತಿಳಿಸಲಾಯಿತು. 

Related posts

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya
error: Content is protected !!