22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿತು.

ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯರವರು ನೂತನ ಶಾಖೆಯನ್ನು ಉದ್ಘಾಟಿಸಿ ಶುಭಕೋರಿದರು.

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್ ನಿರಖು ಠೇವಣಿ ಪತ್ರವನ್ನು ಬಿಡುಗಡೆಗೊಳಿಸಿದರು. ಗಣಕಯಂತ್ರದ ಉದ್ಘಾಟನೆಯನ್ನು ಕಾಯರ್ತ್ತಡ್ಕ ಸೈಂಟ್ ಸೆಬೆಸ್ಟಿಯನ್ ಚರ್ಚ್‌ನ ಧರ್ಮಗುರು ವಂ| ಫಾ. ಜೋಸೆಫ್ ವಾಲುಕಾರನ್ ನೆರವೇರಿಸಿದರು.

ವೇದಿಕೆಯಲ್ಲಿ ಕಾಯರ್ತ್ತಡ್ಕ ಎಂ.ಜೆ.ಎಂ. ಧರ್ಮಗುರು ಮಹಮ್ಮದ್ ಹನೀಫ್ ಮದನಿ, ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರು,ಕ.ರಾ.ಸೌ.ಸಂ.ಸ.ನಿ ಜಿಲ್ಲಾ ಸಂಯೋಜಕ ವಿಜಯ್ ಬಿ.ಎಸ್., ನಿಡ್ಲೆ ಗ್ರಾ.ಪಂ. ಅಧ್ಯಕ್ಷ ಶ್ಯಾಮಲ, ನಿಡ್ಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಕೆ. ಭದ್ರಯ್ಯ ಗೌಡ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಉಮೇಶ್ ಎಬಿ, ಬಿ‌ಎಂ ಅಬ್ದುಲ್ ಹಮೀದ್, ಬಿ‌.ರಾಜಶೇಖರ ಅಜ್ರಿ,ಕೆ.ಎಸ್ ಯೋಗೀಶ್ ಕುಮಾರ್,ಶೈಲೇಶ್ ಕುಮಾರ್, ವಿ‌.ರಮೇಶ್ ಪೂಜಾರಿ, ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಶ್ರೀಮತಿ ಉಷಾ ಶರತ್, ಶ್ರೀಮತಿ ಜೆಸಿಂತಾ ಮೋನಿಸ್, ರಾಗ್ನೀಶ್, ಅಭಿನಂದನ್ ಹರೀಶ್ ಕುಮಾರ್, ಬ್ಯಾಂಕಿನ ಉಪಾಧ್ಯಕ್ಷ ಗಂಗಾಧರ ಮಿತ್ತಮಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಕೆ.ರಾಮಚಂದ್ರ ಗೌಡ ಸ್ವಾಗತಿಸಿದರು. ರಶ್ಮಿತಾ, ಚೈತ್ರಾ, ಪವಿತ್ರಾ ಪ್ರಾರ್ಥನೆಗೈದರು.ಯುವ ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya
error: Content is protected !!