22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಅಳದಂಗಡಿ : 20ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು, ಸಾಧನ ಜ್ಞಾನವಿಕಾಸ ಕೇಂದ್ರ ಮತ್ತು ಜನಜಾಗೃತಿ ಗ್ರಾಮ ಸಮಿತಿ, ಹಾಗೂ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ, ಬಡಗಕಾರಂದೂರು ಇವುಗಳ ಸಹಕಾರದೊಂದಿಗೆ ನಡೆಯಿತು.

ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ್ ಹೊಳ್ಳರವರ ನೇತ್ರತ್ವ ದಲ್ಲಿ ಪೂಜಾ ಧಾರ್ಮಿಕ ಕಾರ್ಯಕ್ರಮ ನಡೆಸಲಾಯಿತು. ಶ್ರೀ ಸೋಮನಾಥೇಶೢರಿ ಭಜನಾ ಮಂಡಲಿ ಅಳದಂಗಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೆ.ವಿ,ಭಟ್ ನಾಳ ಬೆಳ್ತಂಗಡಿ ಧಾರ್ಮಿಕ ಉಪನ್ಯಾಸವನ್ನು ನೀಡಿ ತಾಯಂದಿರು ಮಕ್ಕಳನ್ನು ಯಾವ ರೀತಿ ನೈತಿಕ ಶಿಕ್ಷಣ ನೀಡಿ ಸಾಕಬೇಕು ಎಂಬುದನ್ನು ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷ ರಾಗಿ ಶ್ರೀಮತಿ ಮೀರಾ ನಿತ್ಯಾನಂದ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಾ. ಕೃ.ಪ.ಸಹಕಾರ ಸಂಘ ಅಳದಂಗಡಿ. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿಗಳು ದಯಾನಂದ ಪೂಜಾರಿ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ.ಟ್ರಸ್ಟ್ ಗುರುವಾಯನಕೆರೆ .ರವರು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಮಹತ್ವ ದ ಬಗ್ಗೆ ಮಾತನಾಡಿದರು.ವೇದಿಕೆ ಯಲ್ಲಿ ಶ್ರೀ ನಾರಾಯಣ ಸಾಲಿಯಾನ್ ವಲಯ ಜನಜಾಗ್ರ್ರತಿ ಅಧ್ಯಕ್ಷರು, ಶ್ರೀಮತಿ ರೂಪಾ ವಿಶ್ವನಾಥ, ಅಧ್ಯಕ್ಷರು ಶ್ರೀ ವರಮಹಾಲಕ್ಷ್ಮಿ ಪೂಜೆ ಸಮಿತಿ, ಬಡಗಕಾರಂದೂರು, ಶ್ರೀ ಮಂಜುನಾಥ ಆಚಾರ್ಯ, ಎ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು, ಶ್ರೀ ಹರೀಶ್ ಆಚಾರ್ಯ, ಬಿ ಒಕ್ಕೂಟ ಅಧ್ಯಕ್ಷರು ಬಡಗಕಾರಂದೂರು. ಉಪಸ್ತಿತರಿದ್ದರು. ಎ ಒಕ್ಕೂಟ ಅಧ್ಯಕ್ಷರು ಶ್ರೀ ಮಂಜುನಾಥ ಆಚಾರ್ಯ ಸ್ವಾಗತಿಸಿದರು,ಸೇವಾಫ್ರತಿನಿಧಿ ಶ್ರೀಮತಿ ಹೇಮಲತ ವರದಿ ವಾಚಿಸಿದರು, ಶ್ರೀ ಹರೀಶ್ ಆಚಾರ್ಯ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya
error: Content is protected !!