23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ  “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ  ಮಹಾರಾಜಾ ಕಾಲೇಜು ಮೈದಾನದಲ್ಲಿ ಮುಖ್ಯ ಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಸಚಿವರು  ಚಾಲನೆ ನೀಡುವ ಕಾರ್ಯಕ್ರಮವನ್ನು ನೇರ ಪ್ರಸಾರದ ಮೂಲಕ ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಮಿನಿ ವಿಧಾನಸೌಧ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ, ಹಾಗೂ ಕೆಲ್ಲಗುತ್ತು ಸಮುದಾಯ ಭವನದಲ್ಲಿ ಎಲ್ ಇ ಡಿ ಪರದೆ  ಮೇಲೆ ಬಿತ್ತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ ಟಿ ಸುರೇಶ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಪಿಡಿಪಿಒ ಪ್ರೀಯ ಆಗ್ನೇಸ್, ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ಸದಸ್ಯರಾದ ಜಗದೀಶ್ ಉಪಸ್ಥಿತರಿದ್ದರು.

ಯೋಜನೆಯ ಉದ್ಘಾಟನಾ ಕಾರ್ಯಕ್ರಮ  ಹಾಗು ಸಚಿವರ ಭಾಷಣವನ್ನು ನೇರ ಪ್ರಸಾರದಲ್ಲಿ ಬಿತ್ತರಿಸಲಾಯಿತು.

ಬೆಳ್ತಂಗಡಿ ನಗರದ ಸಹಸ್ರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ನೋಂದಾಯಿತ ಫಲಾನುಭವಿಗಳ ಬ್ಯಾಂಕ್ ಖಾತೆಗೆ  ನಗದು ವರ್ಗಾವಣೆಗೊಂಡ ಬಗೆಗೆ  ಅವರವರ ಮೊಬೈಲ್ ಗೆ ಸಂದೇಶ ರವಾನೆಯಾಗಲಿದೆಯೆಂದು  ತಿಳಿಸಲಾಯಿತು. 

Related posts

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya
error: Content is protected !!