22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು.


ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಲ್ಯಾಬ್ ಪರೀಕ್ಷಾ ವಿಧಾನ ಇದೀಗ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೂ ದೊರೆಯಲಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-2 ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 32 ಸ್ಲೈಸ್ ಸಿಟಿ ಸ್ಕ್ಯಾನ್, ಬಿಪಿಎಲ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

Related posts

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya
error: Content is protected !!