25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ಕಳಿಯ: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಮೈಸೂರಿನಲ್ಲಿ ಸಂಸದರಾದ ರಾಹುಲ್ ಗಾಂಧಿ, ಎ.ಐ.ಸಿ.ಸಿ.ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎ.ಐ.ಸಿ.ಸಿ. ಪ್ರದಾನ ಕಾರ್ಯದರ್ಶಿಯಾದ ಸುರ್ಜೇ ವಾಲಾ ರವರ ಗಣ್ಯ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಆಹಾರ ಮತ್ತು ನಾಗರಿಕ ಪೂರೈಕ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಸರಕಾರದ ಹಲವಾರು ಸಚಿವರು, ಅಧಿಕಾರಿಗಳ ಸಮಕ್ಷಮದಲ್ಲಿ ಉದ್ಘಾಟನೆಗೊಂಡಿತು.


ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಾಮಸ್ಥರು ವೀಕ್ಷಣೆ ಮಾಡಿದರು.
ಹಾಗೂ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಕೂಡಾ ನೀಡಲಾಯಿತು.


ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ.ಎಮ್ ವಹಿಸಿದ್ದರು.
ಉಪಾದ್ಯಕ್ಷೆ ಶ್ರೀಮತಿ ಇಂದಿರಾ, ಅಭಿವೃದ್ಧಿ ಅಧಿಕಾರಿಯಾದ ಸಂತೋಷ್ ಪಾಟೀಲ್,ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಭಾಷಿಣಿ,ಶ್ರೀಮತಿ ಕುಸುಮ.ಎನ್ ಬಂಗೇರ,ಸುದಾಕರ ಮಜಲು,ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ,ಲತೀಫ್ ಪರಿಮ,ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಪುಷ್ಪಾ,ಶ್ರೀಮತಿ ಶ್ವೇತಾ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಹಾಜರಿದ್ದರು.ಪಂಚಾಯತ್ ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ,ನಂದಿನಿ,ರವಿ ಎಚ್,ಸುರೇಶ್ ಗೌಡ ಸಹಕರಿಸಿದರು.

Related posts

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya
error: Content is protected !!