32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಂದಿನ ಎರಡುವರೆ ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ಪ್ರವೀಣ್ ರೈ.ಪಿ ಹಾಗೂ ಉಪಾಧ್ಯಕ್ಷರಾಗಿ ಶಿವರಾಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಆ.31ರಂದು ಸಂಘದ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಇವರಿಬ್ಬರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಪುತ್ತೂರು ಸಹಾಯಕ ಉಪನಿಬಂಧಕರ ಕಚೇರಿಯ ಅಧಿಕಾರಿ ಶಿವಲಿಂಗಯ್ಯ ಭಾಗವಹಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.


ಇದುವರಿಗೆ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಎನ್ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಿ. ಸೇವೆ ಸಲ್ಲಿಸುತ್ತಿದ್ದು, ಎರಡುವರೆ ವರ್ಷ ಅವಧಿ ಮುಗಿದಿರುವುದರಿಂದ ಸಂಘದ ಮುಂದಿನ ಎರಡುವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರವೀಣ್ ರೈ ಪಿ. ಅವರು ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಚುನಾವಣೆ ಸಂದರ್ಭ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಟಿ. ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya
error: Content is protected !!