24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಂದಿನ ಎರಡುವರೆ ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ಪ್ರವೀಣ್ ರೈ.ಪಿ ಹಾಗೂ ಉಪಾಧ್ಯಕ್ಷರಾಗಿ ಶಿವರಾಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಆ.31ರಂದು ಸಂಘದ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಇವರಿಬ್ಬರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಪುತ್ತೂರು ಸಹಾಯಕ ಉಪನಿಬಂಧಕರ ಕಚೇರಿಯ ಅಧಿಕಾರಿ ಶಿವಲಿಂಗಯ್ಯ ಭಾಗವಹಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.


ಇದುವರಿಗೆ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಎನ್ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಿ. ಸೇವೆ ಸಲ್ಲಿಸುತ್ತಿದ್ದು, ಎರಡುವರೆ ವರ್ಷ ಅವಧಿ ಮುಗಿದಿರುವುದರಿಂದ ಸಂಘದ ಮುಂದಿನ ಎರಡುವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರವೀಣ್ ರೈ ಪಿ. ಅವರು ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಚುನಾವಣೆ ಸಂದರ್ಭ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಟಿ. ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!