23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರವು ಅರಸಿನಮಕ್ಕಿಯ ಕುಲಾಲ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮರಾಜ್ ಅಡ್ಕಡಿ ಹಾಗೂ ಸಭಾಧ್ಯಕ್ಷೆಯನ್ನು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀರ್ ವಹಿಸಿದರು.


ಮುಖ್ಯ ಅತಿಥಿಗಳಾಗಿ ತಾಲೂಕಿನ ಜನ ಜಾಗೃತಿ ಸದಸ್ಯೆ ಮಂಜುಳ ಕಾರಂತ್, ತಾಲೂಕು ಜನ ಜಾಗೃತಿ ಸದಸ್ಯರು ಚೆನ್ನಪ್ಪ ಗೌಡ , ರುಡ್ ಸೆಟ್ ತರಬೇತಿ ಸಂಸ್ಥೆಯ ಉಪನ್ಯಾಸಕ ಜೇಮ್ಸ್ ಅಬ್ರಾಮ್, ಅರಸಿನಮಕ್ಕಿ ವಲಯದ ಮೇಲ್ವಿಚಾರಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ಯೋಜನೆಯ ಮಹತ್ವ ಮತ್ತು ಒಬ್ಬ ವ್ಯಕ್ತಿ ಸ್ವಾವಲಂಬಿಯಾಗಿ ಬೆಳೆಯಲು ಯೋಜನೆಯ ಹಲವಾರು ಕಾರ್ಯಕ್ರಮಗಳ ಬಗ್ಗೆ ಹೆಮ್ಮೆಯಿಂದ ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು ಹಾಗೆ ರುಡ್ ಸೆಟ್ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಜೇಮ್ಸ್ ಅಬ್ರಾಮ್ ಇವರು ಸ್ವಉದ್ಯೋಗದ ಬಗ್ಗೆ ಜನರನ್ನು ಪ್ರೇರೇಪಿಸುವಲ್ಲಿ ಮತ್ತು ಸ್ವದ್ಯೋಗವನ್ನು ಮಾಡಲು ಬೇಕಾದ ತರಬೇತಿಗಳ ಬಗ್ಗೆ ಸಹಕಾರವನ್ನು ನೀಡುವುದರ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವುದರ ಬಗ್ಗೆ ತಿಳಿಸಿದರು.

Related posts

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!