ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬ ಹಾಗೂ ಮಹಾಪುರುಷರ ಜಯಂತಿ ಆಚರಣೆ ತಾಲೂಕು ಸಮಿತಿ ಆಶ್ರಯದಲ್ಲಿ ಕಲ್ಮಂಜದ ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ ಆ .31ರಂದು ಪೂರ್ವಾಹ್ನ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯನ್ನು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು .
ತಹಸೀಲ್ದಾರ್ ಟಿ. ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪೃಥ್ವಿಸ್ ಧಮ೯ಸ್ಥಳ ದಿನದ ಮಹತ್ವದ ಬಗ್ಗೆ ಮಾತನಾಡಿದರು.


ವೇದಿಕೆಯಲ್ಲಿ ಸಕ೯ಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್, ನ.ಪಂ ಮುಖ್ಯಾಧಿಕಾರಿ ರಾಜೇಶ್, ಎಡಿಎಲ್ಆರ್ ರೇಣುಕಾ ಪ್ರಸಾದ್, ಚಾತುರ್ಮಾಸ್ಯ ಸಮಿತಿಯ ಸದಾನಂದ ಪೂಜಾರಿ, ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಪ್ರತಿ ಉಪಸ್ಥಿತರಿದ್ದರು.‌

ತಹಶೀಲ್ದಾರ್ ಸ್ವಾಗತಿಸಿದರು. ಸತ್ಯವತಿ ಕಾಯ೯ಕ್ರಮ ನಿರೂಪಿಸಿದರು. ತಾಲೂಕಿನ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ, ಸದಸ್ಯರು ಹಾಗೂ ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು .

Leave a Comment

error: Content is protected !!