ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಬೆಳ್ತಂಗಡಿ ಬಂಟರ ಸಂಘದ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಮಾಜಿ ಅಧ್ಯಕ್ಷರುಗಳಾದ ಜಯರಾಮ್ ಶೆಟ್ಟಿ ಪಡಂಗಡಿ, ಜಯರಾಮ್ ಭಂಡಾರಿ ಧರ್ಮಸ್ಥಳ, ಉಪಾಧ್ಯಕ್ಷ ವಿಠಲ್ ಶೆಟ್ಟಿ ಕೊಲ್ಲೋತ್ತು, ಸೆಕ್ರೆಟರಿ ಸಂಜೀವ ಶೆಟ್ಟಿ ಕುಂಠಿನಿ, ನಿರ್ದೇಶಕರಾದ ಜಯಂತ್ ಶೆಟ್ಟಿ ಮಡಂತ್ಯಾರು, ಕಿರಣ್ ಕುಮಾರ್ ಶೆಟ್ಟಿ ಜೈನಪೇಟೆ, ಯುವ ವಿಭಾಗದ ಅಧ್ಯಕ್ಷ ಸುಜಯ್ ಶೆಟ್ಟಿ ಉಪಸ್ಥಿತರಿದ್ದರು.

Leave a Comment

error: Content is protected !!