27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ ಸೆ.1ರಂದು ಪ್ರಾರಂಭಗೊಂಡು ಸೆ.3 ರವರೆಗೆ ನಡೆಯಲಿದೆ.

ಸೆ.1ರಂದು ಬೆಳಿಗ್ಗೆ 9 ಗಂಟೆಗೆ ಬೆಳ್ತಂಗಡಿಯ ಉದ್ಯಮಿ ಮೋಹನದಾಸ ಕೊರ್ನಾಯರು ಆರಾಧನಾ ಮಹೋತ್ಸವ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್‌ನ ಅಧ್ಯಕ್ಷ ಪೃಥ್ವಿರಂಜನ್ ರಾವ್ ಭಾಗವಹಿಸಲಿದ್ದಾರೆ.

ಸೆ.2ರಂದು ಬೆಳಿಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದ್ದು ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪಿತಾಂಬರ ಹೇರಾಜೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಬೆಂಗಳೂರಿನ ಉದ್ಯಮಿ ಬೇಗೂರು ನಾರಾಯಣ ಹಾಗೂ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ ಭಾಗವಹಿಸಲಿದ್ದಾರೆ.

ಉಜಿರೆ ಶ್ರೀ ಧರ್ಮಸ್ಥಳ ಕಾಲೇಜಿನ ಪ್ರಾಂಶುಪಾಲ ಡಾ| ಕುಮಾರ ಹೆಗ್ಡೆ ಮತ್ತು ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್‌ ಧರ್ಮಸ್ಥಳ ಇವರಿಗೆ ಗೌರವಾರ್ಪಣೆ ಜರಗಲಿದೆ.

ಸೆ.3 ಬೆಳಿಗ್ಗೆ 8 ಗಂಟೆಗೆ ಪಾದಪೂಜೆ ಹಾಗೂ ವಿವಿಧ ಸೇವೆಗಳು ಜರುಗಲಿದೆ.

ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಸ೦ಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಜರಗಲಿದೆ ಎಂದು ಕಾರ್ಯದರ್ಶಿ ಶೇಖರ ಬಂಗೇರ ತಿಳಿಸಿದ್ದಾರೆ.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಲಾಯಿಲ: 36ನೇ ವರ್ಷದ ಶ್ರೀ ಗಣೇಶೋತ್ಸವ ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya
error: Content is protected !!