25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು.


ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಲ್ಯಾಬ್ ಪರೀಕ್ಷಾ ವಿಧಾನ ಇದೀಗ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೂ ದೊರೆಯಲಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-2 ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 32 ಸ್ಲೈಸ್ ಸಿಟಿ ಸ್ಕ್ಯಾನ್, ಬಿಪಿಎಲ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

Related posts

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!