23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು.


ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಲ್ಯಾಬ್ ಪರೀಕ್ಷಾ ವಿಧಾನ ಇದೀಗ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೂ ದೊರೆಯಲಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-2 ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 32 ಸ್ಲೈಸ್ ಸಿಟಿ ಸ್ಕ್ಯಾನ್, ಬಿಪಿಎಲ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

Related posts

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya
error: Content is protected !!