September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಟೆ-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಆ. 28ರಂದು ಅಳವಡಿಸಲಾಯಿತು.


ಮಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಲ್ಯಾಬ್ ಪರೀಕ್ಷಾ ವಿಧಾನ ಇದೀಗ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೂ ದೊರೆಯಲಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-2 ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ 32 ಸ್ಲೈಸ್ ಸಿಟಿ ಸ್ಕ್ಯಾನ್, ಬಿಪಿಎಲ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ.

Related posts

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

Suddi Udaya
error: Content is protected !!