ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

Updated on:

ಉಜಿರೆ :ವಿದ್ಯೆಯಿಂದ ಸ್ವತಂತ್ರರಾಗಿರಿ ಅನ್ನುವ ದೇವ ವಾಕ್ಯದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನದಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವತಿಯಿಂದ ನೆನಪಿನಂಗಳ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಟಿ ಪಿ ಅಂತೋನಿ ಇವರು ಮುಖ್ಯ ಅತಿಥಿಗಳಾಗಿದ್ದು ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಯೋಚಿತ ಹಿತ ನುಡಿಗಳನ್ನು ನೀಡಿದರು.

ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ಹಿರಿಯ ವಿದ್ಯಾರ್ಥಿಗಳು ನಡೆದು ಬಂದ ದಾರಿ ಹಾಗೂ ನೆನಪಿನ ಅಂಗಳ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಜೊತೆ ಕಾರ್ಯದರ್ಶಿ ಶ್ರೀ ಕೆವಿ ಶ್ರೀಧರ್ ಅವರು ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿವೇತನವನ್ನು ನೀಡಿದರು.

ಸಂಯೋಜಕ ಡಾ ಎಂಪಿ ಶ್ರೀನಾಥ್ ರವರು ಸ್ವಾಗತಿಸಿದರು. ಅಭಿಲಾಶ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Comment

error: Content is protected !!