23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರವು ಅರಸಿನಮಕ್ಕಿಯ ಕುಲಾಲ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮರಾಜ್ ಅಡ್ಕಡಿ ಹಾಗೂ ಸಭಾಧ್ಯಕ್ಷೆಯನ್ನು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀರ್ ವಹಿಸಿದರು.


ಮುಖ್ಯ ಅತಿಥಿಗಳಾಗಿ ತಾಲೂಕಿನ ಜನ ಜಾಗೃತಿ ಸದಸ್ಯೆ ಮಂಜುಳ ಕಾರಂತ್, ತಾಲೂಕು ಜನ ಜಾಗೃತಿ ಸದಸ್ಯರು ಚೆನ್ನಪ್ಪ ಗೌಡ , ರುಡ್ ಸೆಟ್ ತರಬೇತಿ ಸಂಸ್ಥೆಯ ಉಪನ್ಯಾಸಕ ಜೇಮ್ಸ್ ಅಬ್ರಾಮ್, ಅರಸಿನಮಕ್ಕಿ ವಲಯದ ಮೇಲ್ವಿಚಾರಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ಯೋಜನೆಯ ಮಹತ್ವ ಮತ್ತು ಒಬ್ಬ ವ್ಯಕ್ತಿ ಸ್ವಾವಲಂಬಿಯಾಗಿ ಬೆಳೆಯಲು ಯೋಜನೆಯ ಹಲವಾರು ಕಾರ್ಯಕ್ರಮಗಳ ಬಗ್ಗೆ ಹೆಮ್ಮೆಯಿಂದ ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು ಹಾಗೆ ರುಡ್ ಸೆಟ್ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಜೇಮ್ಸ್ ಅಬ್ರಾಮ್ ಇವರು ಸ್ವಉದ್ಯೋಗದ ಬಗ್ಗೆ ಜನರನ್ನು ಪ್ರೇರೇಪಿಸುವಲ್ಲಿ ಮತ್ತು ಸ್ವದ್ಯೋಗವನ್ನು ಮಾಡಲು ಬೇಕಾದ ತರಬೇತಿಗಳ ಬಗ್ಗೆ ಸಹಕಾರವನ್ನು ನೀಡುವುದರ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವುದರ ಬಗ್ಗೆ ತಿಳಿಸಿದರು.

Related posts

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!