22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರವು ಅರಸಿನಮಕ್ಕಿಯ ಕುಲಾಲ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮರಾಜ್ ಅಡ್ಕಡಿ ಹಾಗೂ ಸಭಾಧ್ಯಕ್ಷೆಯನ್ನು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧೀರ್ ವಹಿಸಿದರು.


ಮುಖ್ಯ ಅತಿಥಿಗಳಾಗಿ ತಾಲೂಕಿನ ಜನ ಜಾಗೃತಿ ಸದಸ್ಯೆ ಮಂಜುಳ ಕಾರಂತ್, ತಾಲೂಕು ಜನ ಜಾಗೃತಿ ಸದಸ್ಯರು ಚೆನ್ನಪ್ಪ ಗೌಡ , ರುಡ್ ಸೆಟ್ ತರಬೇತಿ ಸಂಸ್ಥೆಯ ಉಪನ್ಯಾಸಕ ಜೇಮ್ಸ್ ಅಬ್ರಾಮ್, ಅರಸಿನಮಕ್ಕಿ ವಲಯದ ಮೇಲ್ವಿಚಾರಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ಯೋಜನೆಯ ಮಹತ್ವ ಮತ್ತು ಒಬ್ಬ ವ್ಯಕ್ತಿ ಸ್ವಾವಲಂಬಿಯಾಗಿ ಬೆಳೆಯಲು ಯೋಜನೆಯ ಹಲವಾರು ಕಾರ್ಯಕ್ರಮಗಳ ಬಗ್ಗೆ ಹೆಮ್ಮೆಯಿಂದ ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು ಹಾಗೆ ರುಡ್ ಸೆಟ್ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಜೇಮ್ಸ್ ಅಬ್ರಾಮ್ ಇವರು ಸ್ವಉದ್ಯೋಗದ ಬಗ್ಗೆ ಜನರನ್ನು ಪ್ರೇರೇಪಿಸುವಲ್ಲಿ ಮತ್ತು ಸ್ವದ್ಯೋಗವನ್ನು ಮಾಡಲು ಬೇಕಾದ ತರಬೇತಿಗಳ ಬಗ್ಗೆ ಸಹಕಾರವನ್ನು ನೀಡುವುದರ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವುದರ ಬಗ್ಗೆ ತಿಳಿಸಿದರು.

Related posts

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿ ಕೆ ಹರಿಪ್ರಸಾದ್‌ರವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘದಿಂದ ಆಗ್ರಹ: ಸಂಜೀವ ಪೂಜಾರಿ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya
error: Content is protected !!