July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ 2023-24 ನೇ ಸಾಲಿನ ಕ್ರೀಡಾವಾಣಿ ಉದ್ಘಾಟನೆ ನಡೆಯಿತು.


ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಡಾಜೆ ಫ್ರೌಡ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ರಾಷ್ಟ್ರೀಯ ಕ್ರೀಡಾಪಟು ಗುಣಪಾಲ್ ಎಂ.ಎಸ್ ಉದ್ಘಾಟಿಸಿ, ಕಾರ್ಯಕ್ರಮದ ಕುರಿತು ಮಾತನಾಡಿ ಕ್ರೀಡಾ ಸಾಧನೆಯನ್ನು ಕೊಂಡಾಡಿದರು. ಹಾಗೂ ಇನ್ನೋರ್ವ ಅತಿಥಿಯಾಗಿ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯನ್ನು ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷರಾಗಿ ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ಹೆಗ್ಡೆ ಉಪಸ್ಥಿತರಿದ್ದು, ಕ್ರೀಡಾ ವಿದ್ಯಾರ್ಥಿ ಗಳನ್ನು ಕುರಿತು ಶಿಕ್ಷಣದ ಜೊತೆಗೆ ಕ್ರೀಡೆ ಯು ದೈಹಿಕ ಹಾಗೂ ಮಾನಸಿಕ ಸ್ಥಿರವನ್ನು ಹೆಚ್ಚಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದರು. ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕ್ರೀಡಾ ನಿರ್ದೇಶಕ ಹಾಗೂ ಮುಖ್ಯಸ್ಥರಾದ ರಮೇಶ್. ಹೆಚ್ ಉಪಸ್ಥಿತರಿದ್ದರು.


ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತರಬೇತುದಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಕರಾದ ಸುದೀನ ಸ್ವಾಗತಿಸಿ, ಸ್ಪೋರ್ಟ್ಸ್ ಕ್ಲಬ್ ನ ವಿದ್ಯಾರ್ಥಿ ಕಾರ್ತಿಕ್ ವಂದಿಸಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya
error: Content is protected !!