23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ “ಕುಂದು ಕೊರತೆಗಳ ಅಹವಾಲು ಸ್ವೀಕಾರ” ಕಾರ್ಯಕ್ರಮದಲ್ಲಿ ಈ ಮನವಿಯನ್ನು ನೀಡಿದಾಗ ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.


ಸಾರ್ವಜನಿಕ ವಿಚಾರದ ಫ್ಲಾಟಿಂಗ್ ಸಮಸ್ಯೆ, ರಸ್ತೆ ಸಮಸ್ಯೆ, ಇನ್ನಿತರ ಮೂಲಭೂತ ಸೌಕರ್ಯಗಳ ರಚನಾತ್ಮಕ ಅರ್ಜಿ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಸಂವಾದ ನಡೆಸಿ, ಸೂಕ್ತ ಪರಿಹಾರಕ್ಕೆ ಸಲಹೆ ನೀಡಿದ್ದಾರೆ.


ಕೆಲವರು ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರ ಬಳಿಯಲ್ಲಿ ತಮ್ಮ ಅಳಳು ಹೇಳಿದಾಗ ಈ ವಿಚಾರ ಕಾನೂನು ವ್ಯಾಪ್ತಿಯಲ್ಲಿ ಜರುಗಬೇಕಾಗುವುದರಿಂದ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾವಧಾನವಾಗಿ ಜನರಿಗೆ ಸಲಹೆ ಸೂಚನೆ ನೀಡುತ್ತಿದ್ದ ವಿಚಾರ ಪ್ರಶಂಸರ್ಹವಾಗಿತ್ತು.
ಅಲ್ಲದೆ ಜಿಲ್ಲಾಧಿಕಾರಿಯವರ ಈ ಭೇಟಿಯಿಂದ ಕಡತ ವಿಲೇವಾರಿ ಕಾರ್ಯಕ್ರಮಕ್ಕೆ ವೇಗ ಬರಲು ಸಹಾಯವಾಗಿದ್ದು, ತಾಲೂಕು ಆಡಳಿತದಲ್ಲಿ ಹೊಸ ಹುರುಪಿಗೆ ಕಾರಣವಾಗಿ, ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮ ಅನುಕೂಲವಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರ ವೃಷಭ ಆರಿಗಾ, ತಾಲೂಕು ಕಾರ್ಯದರ್ಶಿ ಕೃಷ್ಣ ಉಪಸ್ಥಿತರಿದ್ದರು.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya
error: Content is protected !!